‘ಆಯೋಧ್ಯಾ ದೀಪ’ ಯಕ್ಷಗಾನ ಪ್ರದರ್ಶನ; ಪಟ್ಲ ಸತೀಶ್ ಶೆಟ್ಟಿಯವರಿಗೆ ಸನ್ಮಾನ

ನ್ಯೂ ಪನ್ವೇಲ್: ಹಣ ಸರ್ವ ಸಾಮಾನ್ಯವಾಗಿ ಎಲ್ಲರಲ್ಲೂ ಇರುತ್ತದೆ. ಎಲ್ಲರೂ ಹಣ ಸಂಪಾದಿಸುತ್ತಾರೆ. ಆದರೆ ಸಂಪಾದಿಸಿದ ಹಣದಿಂದ ಸ್ವಲ್ಪ ಅಂಶವನ್ನು ದಾನ, ಧರ್ಮದ ರೂಪದಲ್ಲಿ ವಿನಿಯೋಗಿಸುವವರ ಸಂಖ್ಯೆ ಮಾತ್ರ ಬಹಳ ವಿರಳ. ಸಮಾಜದಲ್ಲಿ ನಾವು ಕೂಡಿಟ್ಟ ಹಣದಿಂದ ಗುರುತಿಸಲ್ಪಡುವುದಲ್ಲ, ಸಮಾಜಮುಖಿ ಕಾರ್ಯಗಳಿಂದ ಗುರುತಿಸಲ್ಪಡಬೇಕು. ನಮ್ಮ ಮಕ್ಕಳಿಗೆ ಆಸ್ತಿ ಮಾಡಿಡುವ ಬದಲು ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಒಳ್ಳೆಯ ಸಂಸ್ಕಾರ, ಸಂಸ್ಕೃತಿಯನ್ನು ನೀಡಿ ಮಕ್ಕಳನ್ನೇ ಆಸ್ತಿಯನ್ನಾಗಿರಿಸಿಕೊಂಡು ಬೆಳೆಸುವಂತರಾಗಬೇಕು, ಕೇವಲ ಶ್ರೀಮಂತರಾಗಿದ್ದರೆ ಸಾಲದು. ಹೃದಯ ಶ್ರೀಮಂತಿಕೆ ನಮ್ಮಲ್ಲಿರಬೇಕು. ಇಂತಹ ಎಲ್ಲಾ ಗುಣವನ್ನು ಮೈಗೂಡಿಸಿಕೊಂಡಿರುವ ದಂಪತಿಗಳಲ್ಲಿ ಸಂತೋಷ್ ಶೆಟ್ಟಿ ಮತ್ತು ಶ್ವೇತಾ ಸಂತೋಷ್ ಶೆಟ್ಟಿ ದಂಪತಿ ಎನ್ನಲು ಅಭಿಮಾನವಾಗುತ್ತಿದೆ.

ಮುಂಬಯಿಯಲ್ಲಾಗಲಿ, ತವರೂರಲ್ಲಾಗಲಿ ಯಾವುದೇ ಧಾರ್ಮಿಕ, ಸಾಂಸ್ಕೃತಿಕ ಅಥವಾ ಇನ್ನು ಯಾವುದೇ ಸಮಾಜಪರ ಕಾರ್ಯವಿರಲಿ ಅಲ್ಲಿ ಸಹಾಯ, ಸಹಕಾರವನ್ನು ನೀಡಿ ಪ್ರೋತ್ಸಾಹಿಸುತ್ತಾ ಬಂದಿರುವ ಉತ್ತಮ ಗುಣ ಅವರಲ್ಲಿ ಇದೆ. ಅದರಲ್ಲೂ ಯಕ್ಷಗಾನ ಕಲೆಗೆ ವಿಶೇಷವಾಗಿ ಪ್ರೋತ್ಸಾಹವನ್ನು ನೀಡುತ್ತಾ ಬಂದವರಿದ್ದಾರೆ. ಕಳೆದ ಮೂರು ವರ್ಷಗಳಿಂದ ನಮ್ಮ ಮೇಳಕ್ಕೆ ಮತ್ತು ನಿರಂತರ ಯಕ್ಷಗಾನ ಕಲೆಗೆ ಈ ದಂಪತಿಗಳಿಂದ ಸಂದ ಕೊಡುಗೆ ಅಪಾರವಾಗಿದೆ.

ಸಂತೋಷ್ ಶೆಟ್ಟಿಯವರಂತೆ ಅವರ ಪತ್ನಿ ಶ್ವೇತಾ ಶೆಟ್ಟಿ ಕೂಡಾ ಕಲಾವಿದರಿಗೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನೀಡುತ್ತಾ, ಪತಿಗೆ ತಕ್ಕ ಸತಿಯಾಗಿ, ಆದರ್ಶ ದಂಪತಿಯಾಗಿ ಗುರುತಿಸಿಕೊಂಡವರಿದ್ದಾರೆ. ಅವರಿಗೆ ಮತ್ತು ಅವರ ಪರಿವಾರದ ಎಲ್ಲಾ ಸದಸ್ಯರಿಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಹಾಗೇ ದುರ್ಗಾ ಮಾತೆಯ ಅನುಗ್ರಹವಿರಲಿ, ಅವರ ಎಲ್ಲಾ ಇಷ್ಟಾರ್ಥಗಳು ನೆರವೇರುವಂತೆ ಆಶೀರ್ವದಿಸಲಿ ಎಂದು ಯಕ್ಷಧ್ರುವ ಪಟ್ಟ ಫೌಂಡೇಶನ್‌ನ ರೂವಾರಿ ನಾಮಾಂಕಿತ ಭಾಗವತ ಯಕ್ಷಧ್ರುವ ಪಟ್ಟ ಸತೀಶ್ ಶೆಟ್ಟಿ ಅಭಿಮಾನದ ನುಡಿಗಳೊಂದಿಗೆ ಶುಭ ಹಾರೈಸಿದರು.

ಅವರು ಅ. 21 ರ ಸೋಮವಾರ ರಾತ್ರಿ ನ್ಯೂ ಪನ್ವೇಲ್ ಮಾಥೇರನ್ ರೋಡ್, ರಾಜೀವ ಗಾಂಧಿ ಮೈದಾನದ ಹತ್ತಿರದ 5 ಹೊಟೇಲ್ ಸೈಸ್ ವಾಡಿ ಸಭಾಂಗಣದಲ್ಲಿ ಪನ್ನೇಲ್‌ನ ಜನಪ್ರಿಯ ನಗರ ಸೇವಕ ಸಂತೋಷ್ ಶೆಟ್ಟಿ ಮತ್ತು ಶ್ವೇತಾ ಸಂತೋಷ್ ಶೆಟ್ಟಿ ದಂಪತಿಯ ಸೇವಾ ರೂಪದ ಬಯಲಾಟವಾಗಿ, ತ್ರಿರಂಗ ಸಂಗಮ ಮುಂಬಯಿಯ ಸಂಚಾಲಕತ್ವದಲ್ಲಿ, ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗಜ ಕ್ಷೇತ್ರ ಪಾವಂಜೆ ಮೇಳದ ಕಲಾವಿದರಿಂದ ಪ್ರದರ್ಶಿಸಲ್ಪಟ್ಟ ‘ಅಯೋಧ್ಯಾ ದೀಪ’ ಯಕ್ಷಗಾನ ಪ್ರದರ್ಶನದ ಮಧ್ಯೆ ಜರಗಿದ ಸಭಾ ಕಾರ್ಯಕ್ರಮದಲ್ಲಿ ಆಯೋಜಕರು ನೀಡಿದ ಗೌರವ ಪೂರ್ವಕ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಿದ್ದರು.

ನಗರ ಸೇವಕ ಸಂತೋಷ್ ಶೆಟ್ಟಿ ಮತ್ತು ಶ್ವೇತಾ ಸಂತೋಷ್ ಶೆಟ್ಟಿ ದಂಪತಿ ವತಿಯಿಂದ ನೀಡಲಾದ ಗೌರವ ಪೂರ್ವಕ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಿದ್ದರು. ಹಾಗೇ ಪಟ್ಟ ಸತೀಶ್ ಶೆಟ್ಟಿ, ಸಂತೋಷ್ ಶೆಟ್ಟಿಯವರ ಪತ್ನಿ ಶ್ವೇತಾ ಸಂತೋಷ್ ಶೆಟ್ಟಿ ಸೇರಿದಂತೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಶಾಲು ಹೊದಿಸಿ, ಫಲಪುಷ್ಪ ನೆನಪಿನ ಕಾಣಿಕೆಯೊಂದಿಗೆ ಅದರಪೂರ್ವಕವಾಗಿ ಗೌರವಿಸಿ, ಸತ್ಕರಿಸಿದರು.

ಇದೇ ವೇಳೆ ಮೇಳದ ಪ್ರಮುಖ ಕಲಾವಿದರುಗಳಾದ ರಾಧಾಕೃಷ್ಣ ನಾವಡ, ಅಕ್ಷಯ್‌ ಕುಮಾರ್ ಮಾರ್ನಾಡ್, ದಿನೇಶ್ ಶೆಟ್ಟಿ ಟ್ಟಿ ಕಾವಳಕಟ್ಟೆ, ಮಾಧವ ಬಂಗೇರ ಕೆಳಕ್ರಮಜಲ್, ಯಕ್ಷಗುರು ಕಲಾವಿದ ರಾಕೇಶ್ ರೈ ಅಡ್ಕ ಅವರನ್ನು ಶ್ವೇತಾ ಸಂತೋಷ್ ಶೆಟ್ಟಿ ಹೂ ಗುಚ್ಛ ನೀಡಿ ಗೌರವಿಸಿ, ಅಭಿನಂದಿಸಿದರು. ಮೇಳದ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಿ ಸಹಕರಿಸಿದ ಶ್ವೇತಾ ಸಂತೋಷ್ ಶೆಟ್ಟಿಯವರನ್ನು ಅವರ ತಾಯಿಯವರ ಜೊತೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಹೂ ಗುಚ್ಛ ನೀಡಿ ಗೌರವಿಸಿದರು. ಸಮಾರಂಭದ ವೇದಿಕೆಯಲ್ಲಿ ಆಯೋಜಕರಾದ ಶ್ವೇತಾ ಸಂತೋಷ್ ಶೆಟ್ಟಿ ಜೊತೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಸುಜಿತ್ ಕೋಟ್ಯಾನ್, ಅಜಯ್ ಶೆಟ್ಟಿ, ಕರುಣಾಕರ್ ಶೆಟ್ಟಿ, ರಾಜೇಶ್ ಶೆಟ್ಟಿ ವಯ್ಯಾರು, ಶಶಿ ಶೆಟ್ಟಿ, ಪನ್ವೇಲ್, ದಿವಾಕರ್ ಶೆಟ್ಟಿ ಪಸ್ರೇಲ್, ನವೀನ್ ಹೆಗ್ಡೆ ಖಾರ್ಘರ್, ಸದಾನಂದ ಶೆಟ್ಟಿ ಸ್ವಾಮಿ ಹೋಟೇಲ್, ರತ್ನಾಕರ್ ಶೆಟ್ಟಿ ಪನ್ನೇಲ್, ಚೆಲ್ಲಡ್ಕ ಪ್ರಕಾಶ್ ಶೆಟ್ಟಿ, ಸಂಜೀವ ಶೆಟ್ಟಿ ಪಸ್ಟ್ರೇಲ್, ಸುರೇಶ್ ಶೆಟ್ಟಿ ಸಿಬಿಡಿ, ನವೀನ್ ಶೆಟ್ಟಿ, ಸಿಬಿಡಿ, ಶಿವಾಜಿ ಶೆಟ್ಟಿ ಪಸ್ಟ್ರೇಲ್, ಸತೀಶ್ ಶೆಟ್ಟಿ ಕುತ್ಯಾರು, ಸೀತಾರಾಮ ಶೆಟ್ಟಿ ಪಸ್ಟ್ರೇಲ್ ಹಾಗೂ ಶ್ರೀರಂಗ ಸಂಗಮ ಮುಂಬಯಿಯ ಸಂಚಾಲಕ ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮತ್ತು ನವೀನ್ ಶೆಟ್ಟಿ ಇನ್ನ ಬಾಳಿಕೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕರ್ನೂರು ಮೋಹನ್ ರೈ ನಿರೂಪಿಸಿ, ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ‘ಆಯೋಧ್ಯಾ ದೀಪ’ ಯಕ್ಷಗಾನವನ್ನು ಮುಂದುವರಿಸಲಾಯಿತು.

LATEST POST
ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ - 2025 ರಾಷ್ಟ್ರೀಯ ಕಲಾ ಸಮ್ಮೇಳನ ದಿನಾಂಕ ▪️ 01.06.2025 ಆದಿತ್ಯವಾರ ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು ಆಮಂತ್ರಣ ಪತ್ರಿಕೆ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕವು ಮೇ 10, 2025 ರಂದು ಜರ್ಮನಿಯ ಅಲ್ಸ್ಬಾಕ್‌ನಲ್ಲಿ "ಭಾರತ್ ಕಲಾ ವೈಭವ" ಸಾಂಸ್ಕೃತಿಕ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಾಂಸ್ಕೃತಿಕ ಉತ್ಸವವು ನಮ್ಮ ಫೌಂಡೇಶನ್‌ಗಾಗಿ ಹೆಮ್ಮೆಗುರಿಯಾಗಿದೆ, ಯಾಕಂದರೆ ಇದು ಭಾರತದ ಕಲೆಗಳು ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಯೂರೋಪಿನ...

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ...

A New Beginning: Housewarming Held for 36th Artist Home by Patla Foundation

ಬೇಬಿ ಮತ್ತು ಬಾಲಕೃಷ್ಣ ಪುರುಷ ರಿಗೆ ಪಟ್ಲ ಯಕ್ಷಾಶ್ರಯದ 36ನೇ ಮನೆ

Mangaluru News: ಹಲವು ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವ ಪಟ್ಲ ಫೌಂಡೇಶನ್‌ ವತಿಯಿಂದ, ಇನ್ನೋರ್ವ ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ವಿಶೇಷ ಅಂದ್ರೆ ಇದು ಪಟ್ಲ ಫೌಂಡೇಶನ್‌ ವತಿಯಿಂದ ಕಲಾವಿದರಿಗೆ ನೀಡುತ್ತಿರುವ 36ನೇ ಮನೆಯಾಗಿದೆ. ಬೇಬಿ ಮತ್ತು ಬಾಲಕೃಷ್ಣ ಪುರುಷ ಎಂಬುವವರಿಗೆ ಪರುವಾಯಿಯ ಓಣಿ ಬಾಗಿಲು...

With 36 Homes Delivered, Patla Foundation Breaks Ground on 20 More for Artists

ಪಟ್ಲ ಯಕ್ಷಾಶ್ರಯದಡಿ 20 ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಶೃಂಗೇರಿ ಶ್ರೀಗಳು

Mangaluru News: ಎಷ್ಟೋ ಯಕ್ಷಗಾನ ಕಲಾವಿದರಿಗೆ ಪಟ್ಲ ಯಕ್ಷಾಶ್ರಯದಡಿ ಹಲವು ಮನೆಗಳನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಟ್ಟಿ ಕೊಟ್ಟಿದ್ದಾರೆ. ಅದೇ ರೀತಿ, ಉಡುಪಿಯಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಹಲವು ಯಕ್ಷಗಾನ ಕಲಾವಿದರಿಗಾಗಿ ಮನೆ ನಿರ್ಮಿಸಲು ಭಾಗವತರು ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ 36 ಮನೆಗಳನ್ನು...

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಬಹ್ರೈನ್ – ಯಕ್ಷಧ್ರುವ ಪಟ್ಲ ಫೌಂಡೇಶನ್ ಬಹ್ರೈನ್ ಮತ್ತು ಸೌದಿ ಘಟಕವು ತಮ್ಮ ಮೂರನೇ ವಾರ್ಷಿಕ ರಕ್ತದಾನ ಶಿಬಿರವನ್ನು ಸಲ್ಮಾನಿಯಾ ಮೆಡಿಕಲ್ ಕಾಂಪ್ಲೆಕ್ಸ್‌ನ ಸೆಂಟ್ರಲ್ ಬ್ಲಡ್ ಬ್ಯಾಂಕ್‌ನಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಸಂಜೆ 7:00 ಗಂಟೆಯಿಂದ ರಾತ್ರಿ 11:30ರವರೆಗೆ ನಡೆದ ಈ ಶಿಬಿರದಲ್ಲಿ 80 ಕ್ಕೂ ಹೆಚ್ಚು ದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು.

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿದೆ. ಇದು ಬಹಳ ಸಂತಸದ ವಿಚಾರ. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜೊತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಇಂತಹ ಸಂಘಟನೆ ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.