ಡಿ. 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ

ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ “ಯಕ್ಷ ಸಂಭ್ರಮ” ಅದ್ದೂರಿಯಾಗಿ ನಡೆಯಲಿದೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು.

ಅವರು ಬೆಳ್ತಂಗಡಿ ಲಯನ್ಸ್‌ ಭವನದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಟ್ಲ ಫೌಂಡೇಶನ್ ಮಹಾಪೋಷಕರಾದ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಶಶಿಧರ್ ಶೆಟ್ಟಿಯವರ ಮಾರ್ಗದರ್ಶನದಂತೆ ಕಳೆದ ಎರಡು ವರ್ಷಗಳಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ ಯಶಸ್ವಿಯಾಗಿ ನಡೆದಿದ್ದು, ತಾಲೂಕಿನ ವಿವಿಧ ಕಡೆಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬೇಕು ಎಂಬ ನಿಟ್ಟಿನಲ್ಲಿ ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಮೂರನೇ ವರ್ಷದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 11.30ಕ್ಕೆ ಕಾರ್ಯಕ್ರಮ ಉದ್ಘಾಟನೆಯನ್ನು ತಹಶೀಲ್ದಾರ್ ಪ್ರಥ್ವಿ ಸಾನಿಕಂ ಮಾಡಲಿದ್ದಾರೆ. ಶಶಿಧರ್ ಶೆಟ್ಟಿ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್.ಲಕ್ಷ್ಮೀ ಗ್ರೂಪ್ ಉಜಿರೆ ಮಾಲಕ ಮೋಹನ್ ಕುಮಾರ್, ಹಾಗೂ ಯಕ್ಷಧ್ರುವ ಯಕ್ಷಶಿಕ್ಷಣ ಮಂಗಳೂರು ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಪಣಂಬೂರು ಭಾಗವಹಿಸಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದ ಬಳಿಕ ತಾಲೂಕಿನ 8 ಶಾಲೆಗಳ ಯಕ್ಷಧ್ರುವ ಯಕ್ಷಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಸಂಜೆ 5.30 ರಿಂದ ಗುರುವಾಯನಕೆರೆ ಬಂಟರ ಭವನದ ಬಳಿಯಿಂದ ಭಜನಾ ತಂಡಗಳು, ತಾಲೀಮು ತಂಡ, ಚೆಂಡೆ ವಾದ್ಯಗಳ ಭವ್ಯ ಮೆರವಣಿಗೆ ಕ್ರೀಡಾಂಗಣಕ್ಕೆ ಆಗಮಿಸಲಿದೆ. ಸಂಜೆ 7.30 ಕ್ಕೆ ಘಟಕದ ಗೌರವಾಧ್ಯಕ್ಷ ಶಶಿಧ‌ರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಯವರಿಗೆ ಯಕ್ಷ ಸಂಭ್ರಮ 2024 ಪ್ರಶಸ್ತಿ ಪ್ರಧಾನ ನಡೆಯಲಿದೆ. ಹಿರಿಯ ವೈದ್ಯರುಗಳಾದ ಗುರುವಾಯನಕೆರೆಯ ಡಾ. ವೇಣುಗೋಪಾಲ ಶರ್ಮ, ಬೆಳ್ತಂಗಡಿಯ ಡಾ. ಕೆ.ಜಿ. ಪಣಿಕರ್ ಅವರಿಗೆ ಗೌರವ ಸನ್ಮಾನ, ಹಾಗೂ ಸಾಧಕರಾದ ನಿಡ್ಲೆಯ ಅಗ್ರೀಲಿಫ್ ಸಂಸ್ಥೆಯ ಅವಿನಾಶ್ ರಾವ್ ಮತ್ತು ಅತಿಶಯ ಜೈನ್ ರಿಗೂ ಸನ್ಮಾನ ನಡೆಯಲಿದೆ.

ಚಲನಚಿತ್ರ ನಟ-ನಟಿಯರು, ಕಿರುತೆರೆ, ಯಕ್ಷಗಾನ ಕಲಾವಿದರು ಭಾಗವಹಿಸಲಿದ್ದಾರೆ. ವಿಶೇಷ ರೀತಿಯ ಆಹಾರ ಖಾದ್ಯಗಳು ಹಾಗೂ ಬಂಗಾರ ಗೆಲ್ಲುವ ಅವಕಾಶ, ಕಾರ್ಯಕ್ರಮದಲ್ಲಿ ಇರಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಘುರಾಮ ಶೆಟ್ಟಿ ಉಜಿರೆ, ವಸಂತ ಶೆಟ್ಟಿ ಶ್ರದ್ಧಾ, ಕಿರಣ್ ಕುಮಾರ್, ತುಕರಾಮ್ ಉಪಸ್ಥಿತರಿದ್ದರು.

LATEST POST
ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ - 2025 ರಾಷ್ಟ್ರೀಯ ಕಲಾ ಸಮ್ಮೇಳನ ದಿನಾಂಕ ▪️ 01.06.2025 ಆದಿತ್ಯವಾರ ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು ಆಮಂತ್ರಣ ಪತ್ರಿಕೆ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕವು ಮೇ 10, 2025 ರಂದು ಜರ್ಮನಿಯ ಅಲ್ಸ್ಬಾಕ್‌ನಲ್ಲಿ "ಭಾರತ್ ಕಲಾ ವೈಭವ" ಸಾಂಸ್ಕೃತಿಕ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಾಂಸ್ಕೃತಿಕ ಉತ್ಸವವು ನಮ್ಮ ಫೌಂಡೇಶನ್‌ಗಾಗಿ ಹೆಮ್ಮೆಗುರಿಯಾಗಿದೆ, ಯಾಕಂದರೆ ಇದು ಭಾರತದ ಕಲೆಗಳು ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಯೂರೋಪಿನ...

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ...

A New Beginning: Housewarming Held for 36th Artist Home by Patla Foundation

ಬೇಬಿ ಮತ್ತು ಬಾಲಕೃಷ್ಣ ಪುರುಷ ರಿಗೆ ಪಟ್ಲ ಯಕ್ಷಾಶ್ರಯದ 36ನೇ ಮನೆ

Mangaluru News: ಹಲವು ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವ ಪಟ್ಲ ಫೌಂಡೇಶನ್‌ ವತಿಯಿಂದ, ಇನ್ನೋರ್ವ ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ವಿಶೇಷ ಅಂದ್ರೆ ಇದು ಪಟ್ಲ ಫೌಂಡೇಶನ್‌ ವತಿಯಿಂದ ಕಲಾವಿದರಿಗೆ ನೀಡುತ್ತಿರುವ 36ನೇ ಮನೆಯಾಗಿದೆ. ಬೇಬಿ ಮತ್ತು ಬಾಲಕೃಷ್ಣ ಪುರುಷ ಎಂಬುವವರಿಗೆ ಪರುವಾಯಿಯ ಓಣಿ ಬಾಗಿಲು...

With 36 Homes Delivered, Patla Foundation Breaks Ground on 20 More for Artists

ಪಟ್ಲ ಯಕ್ಷಾಶ್ರಯದಡಿ 20 ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಶೃಂಗೇರಿ ಶ್ರೀಗಳು

Mangaluru News: ಎಷ್ಟೋ ಯಕ್ಷಗಾನ ಕಲಾವಿದರಿಗೆ ಪಟ್ಲ ಯಕ್ಷಾಶ್ರಯದಡಿ ಹಲವು ಮನೆಗಳನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಟ್ಟಿ ಕೊಟ್ಟಿದ್ದಾರೆ. ಅದೇ ರೀತಿ, ಉಡುಪಿಯಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಹಲವು ಯಕ್ಷಗಾನ ಕಲಾವಿದರಿಗಾಗಿ ಮನೆ ನಿರ್ಮಿಸಲು ಭಾಗವತರು ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ 36 ಮನೆಗಳನ್ನು...

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಬಹ್ರೈನ್ – ಯಕ್ಷಧ್ರುವ ಪಟ್ಲ ಫೌಂಡೇಶನ್ ಬಹ್ರೈನ್ ಮತ್ತು ಸೌದಿ ಘಟಕವು ತಮ್ಮ ಮೂರನೇ ವಾರ್ಷಿಕ ರಕ್ತದಾನ ಶಿಬಿರವನ್ನು ಸಲ್ಮಾನಿಯಾ ಮೆಡಿಕಲ್ ಕಾಂಪ್ಲೆಕ್ಸ್‌ನ ಸೆಂಟ್ರಲ್ ಬ್ಲಡ್ ಬ್ಯಾಂಕ್‌ನಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಸಂಜೆ 7:00 ಗಂಟೆಯಿಂದ ರಾತ್ರಿ 11:30ರವರೆಗೆ ನಡೆದ ಈ ಶಿಬಿರದಲ್ಲಿ 80 ಕ್ಕೂ ಹೆಚ್ಚು ದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು.

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿದೆ. ಇದು ಬಹಳ ಸಂತಸದ ವಿಚಾರ. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜೊತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಇಂತಹ ಸಂಘಟನೆ ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.