yakshadhruvapatlafoundation.org

ಯಕ್ಷಶಿಕ್ಷಣ ವಿದ್ಯಾರ್ಥಿಗಳ ಜೊತೆ ಪಟ್ಲ ಸತೀಶ್ ಶೆಟ್ಟಿ ಸಂವಾದ

ಶಿವಮೊಗ್ಗ ಜಿಲ್ಲೆಯ ಹೆಬ್ಬಯಿಲು ಗ್ರಾಮದ ಸರಕಾರಿ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತವಾಗಿ ನಡೆಯುತ್ತಿರುವ ಯಕ್ಷಧ್ರುವ ಯಕ್ಷಶಿಕ್ಷಣದ ವಿದ್ಯಾರ್ಥಿಗಳ ಜೊತೆ ಪಟ್ಲ ಸತೀಶ್ ಶೆಟ್ಟಿಯವರು ಸಂವಾದ ನಡೆಸಿ ನಾಟ್ಯಭ್ಯಾಸವನ್ನು ಕಣ್ಣುತುಂಬಿಸಿಕೊಂಡರು.

ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭ

ಯಕ್ಷಧ್ರುವ ಪಟ್ಲ ಸತೀಶ್ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭವು 21-11-2024ರಂದು ನೂತನವಾಗಿ ಉದ್ಘಾಟನೆಗೊಂಡ ಶೇಡಿಕೊಡ್ಲು ಮಂದಾರ್ತಿ ದುರ್ಗಾ ಗಾರ್ಡನ್ ಆವರಣದಲ್ಲಿ ಬ್ರಹ್ಮಾವರ ಘಟಕದ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ ಕೊಕ್ಜರ್ಣೆ ಇವರ ಸಭಾಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಯಿತು. ದಿ| ಚಂದ್ರ ನಾಯ್ಕರ ಧರ್ಮಪತ್ನಿ ಶ್ರೀಮತಿ ವಾಣಿ ಇವರಿಗೆ ನೀಲಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೂ. 25 ಸಾವಿರ ಆಸರೆಯ ಪ್ರೋತ್ಸಾಹಧನ, ಹಿರಿಯ ಕಲಾವಿದ ಅಜ್ರಿ ಗೋಪಾಲ ಗಾಣಿಗ ಇವರಿಗೆ ಮನೆ ನಿರ್ಮಾಣ ಸಹಾಯಾರ್ಥವಾಗಿ ರೂ. 5 ಲಕ್ಷದ ಮೊತ್ತವನ್ನು ನೀಡಲಾಯಿತು.

ಕಾರ್ಕಳ ಘಟಕದ ಒಂಬತ್ತನೇ ‘ಪಟ್ಲ ಸಂಭ್ರಮೋತ್ಸವ’

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ “ಪಟ್ಲ  ಸಂಭ್ರಮೋತ್ಸವ” ಹಾಗೂ ಯಕ್ಷಕಲಾರಂಗ (ರಿ) ಕಾರ್ಕಳ ಇದರ 12ನೇ ವಾರ್ಷಿಕೋತ್ಸವವು ಪಟ್ಲ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ  ಕಾರ್ಕಳ  ಮಾರಿಗುಡಿ ವಠಾರದಲ್ಲಿ ನಡೆಯಿತು. ಗೋವಾ ಘಟಕದ ಅಧ್ಯಕ್ಷರಾದ ಉದ್ಯಮಿ ಗಣೇಶ್ ಶೆಟ್ಟಿ,  ರಶ್ಮಿ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ಅಧ್ಯಕ್ಷರಾದ ಡಿ. ಆರ್.‌ರಾಜು ಇವರ ಗೌರವ  ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ.) ಮಂಗಳೂರು ಇದರ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯು ಮಂಗಳೂರಿನ ಕದ್ರಿಯಲ್ಲಿ ದಿನಾಂಕ: 17/11/2024ರ ರವಿವಾರ ನಡೆಯಿತು.

ಕನ್ಯಾನ ಸದಾಶಿವ ಶೆಟ್ಟರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನಿಂದ ಸಮ್ಮಾನ

ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಕೆ. ಶೆಟ್ಟಿ ಅವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಗೌರವ ಅಭಿನಂದನೆ ಸಲ್ಲಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಅವರು, ಸಮಾಜ ಸೇವೆ ಮಾಡಲು ನನಗೆ ಭಗವಂತ ನೀಡಿರುವ ಆಶೀರ್ವಾದವಾಗಿದ್ದು, ನನ್ನ ಬದುಕಿನ ಸುಯೋಗವಾಗಿದೆ. ಬಡ ಜನತೆಯ ಸೇವೆ ನನಗೆ ತೃಪ್ತಿ ನೀಡಿದೆ. ಸಮಾಜದ ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ ಸಾಧ್ಯವಾಗಿದೆ ಎಂದರು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಉಡುಪಿ ಘಟಕದ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ನಿರುಪಮಾ ಪ್ರಸಾದ್ ಆಯ್ಕೆ

ಪಾವಂಜೆ ಮೇಳದ ಪಂಚಮ ವರ್ಷದ ಯಾನದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕೇಂದ್ರೀಯ ಸಮಿತಿ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ದೇಶ ವಿದೇಶಗಳಲ್ಲಿ 41 ಘಟಕಗಳನ್ನು ಹೊಂದಿದ್ದು, ಇದೀಗ ಉಡುಪಿ ಮಹಿಳಾ ವಿಭಾಗದ ಉದ್ಘಾಟನೆ ನ. 14ರಂದು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿದೆ.

ಪಾವಂಜೆ ಮೇಳ: 5ನೇ ವರ್ಷದ ತಿರುಗಾಟ ಆರಂಭ

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇದರ ಯಕ್ಷಗಾನ ಮೇಳದ 5ನೇ ವರ್ಷದ ತಿರುಗಾಟವು 4 ಬುಧವಾರ ಕ್ಷೇತ್ರದಲ್ಲಿ ಕಲಾವಿದರಿಗೆ ಗೆಜ್ಜೆ ಪ್ರದಾನ ಕಾರ್ಯಕ್ರಮ ದೊಂದಿಗೆ ಆರಂಭಗೊಂಡಿತು.

ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಬೆಂಗಳೂರಿನಲ್ಲಿ ಒಂದೇ ದಿನ ಎರಡು ಕಾರ್ಯಕ್ರಮಗಳು ಸಂಪನ್ನ

ಕ್ಷಿಪ್ರ ಅವಧಿಯಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಬೆಂಗಳೂರು ಮಹಾನಗರದಲ್ಲಿ ಒಂದೇ ದಿನ ಎರಡು ಕಾರ್ಯಕ್ರಮಗಳು ಸಂಪನ್ನವಾದವು.

ಕಾರ್ಕಳ: 9ನೇ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ರಿ. ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ ಪಟ್ಲ ಸಂಭ್ರಮವು ಇದೇ ನವೆಂಬರ್‌ 16 ನೇ ಶನಿವಾರ ಕಾರ್ಕಳ ಮಾರಿಗುಡಿಯ ವಠಾರದಲ್ಲಿ ನಡೆಯಲಿದ್ದು, ಇಂದು ಆಮಂತ್ರಣ ಪತ್ರಿಕೆ ಮಾರಿಯಮ್ಮನ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು.

ರಂಗ ಶಂಕರ ಆಡಿಟೋರಿಯಂನಲ್ಲಿ ಅಪಾರ ಮೆಚ್ಚುಗೆ ಗಳಿಸಿದ ಪಾವಂಜೆ ಮೇಳದ ಯಕ್ಷಗಾನ ಪ್ರದರ್ಶನ

ಪಟ್ಲ ಸತೀಶ್ ಶೆಟ್ಟಿ ನೇತ್ರತ್ವದಲ್ಲಿ ರಂಗಭೂಮಿ ಹಾಗೂ ಚಲನಚಿತ್ರದಲ್ಲಿ ಮಿಂಚಿದ ಮೇರುನಟ ದಿ| ಶಂಕರ್ ನಾಗ್ ಇವರ ಧರ್ಮಪತ್ನಿ ಅರುಂಧತಿ ನಾಗ್ ಅವರ ಪರಿಕಲ್ಪನೆಯ  ರಂಗ ಶಂಕರ ಆಡಿಟೋರಿಯಂನಲ್ಲಿ ಪಾವಂಜೆ ಮೇಳದ ಯಕ್ಷಗಾನ ಪ್ರದರ್ಶನ ಪ್ರಬುದ್ಧ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಗಳಿಸಿತು.