ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಪದಪ್ರದಾನ

ಪುತ್ತೂರು: ಪಟ್ಲ ಫೌಂಡೇಶನ್‌ನಲ್ಲಿ ಸ್ವಾರ್ಥವಿಲ್ಲ, ವ್ಯಕ್ತಿಗತವಾಗಿ ಕೆಲಸ ಮಾಡುವುದಿಲ್ಲ. ಬದಲಾಗಿ ಯಕ್ಷರಂಗದ ಕಲಾವಿದರ ಬದುಕಿಗೋಸ್ಕರ ಸೇವೆ ನೀಡುವುದಾಗಿದೆ ಮಾತ್ರವಲ್ಲ ಇದರಿಂದ ನಮಗೆ ಆತ್ಮ ತೃಪ್ತಿ ಲಭಿಸುತ್ತದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಮಾತೃ ಘಟಕದ ಅಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿರವರು ಹೇಳಿದರು.

ನ.17ರಂದು ದರ್ಬೆ ಬೈಪಾಸ್ ರಸ್ತೆಯ ಹೊಟೇಲ್ ಅಶ್ವಿನಿ ಸಭಾಂಗಣದಲ್ಲಿ ಸಂಜೆ ಜರಗಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕ ಇದರ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭದಲ್ಲಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ರಂಗದಲ್ಲಿನ ಕಲಾವಿದರ ಮಕ್ಕಳ ಶಿಕ್ಷಣ ಹಾಗೂ ಅರೋಗ್ಯಕ್ಕೆ ಈಗಾಗಲೇ ರೂ.11 ಕೋಟಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವಿನಿಯೋಗಿಸಿದೆ. ಪ್ರಸ್ತುತ ಯಕ್ಷಧ್ರುವ ಪಟ್ಲ ಫೌಂಡೇಶನ್ 39 ಘಟಕ ಹೊಂದಿದ್ದು, ಈ ಘಟಕದ ಮುಖಾಂತರ ಸರಕಾರಿ ಶಾಲೆಯ ಸುಮಾರು 45೦೦ ಮಕ್ಕಳಿಗೆ ‘ಯಕ್ಷ ಶಿಕ್ಷಣ’ದಡಿಯಲ್ಲಿ ಸರಕಾರದ ಅನುಮತಿಯೊಂದಿಗೆ ನೆರವನ್ನು ನೀಡುವ ಮೂಲಕ ಸ್ಪಂದಿಸಿದ್ದೇವೆ. ನಾವು ಸಮಾಜದಲ್ಲಿನ ಅಶಕ್ತರ ಕಣ್ಣೀರೊರೆಸುವ ಕೈಂಕರ್ಯವನ್ನು ಮಾಡಿದಾಗ ಯಾವುದೇ ಘಟಕವು ಯಶಸ್ವಿಯಾಗಬಲ್ಲುದು ಎಂದರು.

ಯಕ್ಷ ಕಲಾವಿದರಿಗೆ ಜೀವನದ ಭದ್ರತೆ ಒದಗಿಸಿದ್ದು ಪಟ್ಲ ಫೌಂಡೇಶನ್-ಸವಣೂರು ಸೀತಾರಾಮ್ ರೈ:
ಅಧ್ಯಕ್ಷತೆ ವಹಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಗೌರವಾಧ್ಯಕ್ಷ ‘ಸಹಕಾರ ರತ್ನ’ ಸವಣೂರು ಸೀತಾರಾಮ ರೈ ಮಾತನಾಡಿ, ಯಕ್ಷಗಾನ ಕಲಾವಿದರಿಗೆ ಗೌರವ ಮತ್ತು ಮರ‍್ಯಾದೆ ಇವೆರಡೂ ಕೊಟ್ಟದ್ದು ಮಾತ್ರ ಪಟ್ಲ ಫೌಂಡೇಶನ್ ಜೊತೆಗೆ ಯಕ್ಷರಂಗದ ಕಲಾವಿದರ ಕಷ್ಟದ ಸಮಯದಲ್ಲಿ ಅವರಿಗೆ ಪಿಎಫ್ ಹಾಗೂ ಇನ್ಸೂರೆನ್ಸ್ ಮಾಡಿ ಜೀವನದ ಭದ್ರತೆ ಒದಗಿಸಿದ್ದು ಕೂಡ ಪಟ್ಲ ಫೌಂಡೇಶನ್ ಆಗಿದೆ. ಅಮೇರಿಕದ ನ್ಯೂಜೆರ್ಸಿಯಲ್ಲೂ ಪಟ್ಲ ಫೌಂಡೇಶನ್‌ರವರ ಘಟಕ ಲೋಕಾರ್ಪಣೆಗೊಳಿಸಿದ ಸಂದರ್ಭದಲ್ಲೂ ಯಕ್ಷ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ನೋಡಿದಾಗ ಯಕ್ಷಗಾನದ ಪ್ರಸಿದ್ಧತೆ ಎದ್ದು ಕಾಣುತ್ತದೆ ಎಂದರು.

ಸಮಾನ ಮನಸ್ಕರಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಹುಟ್ಟು ಹಾಕಿಕೊಂಡಿದೆ-ಪುರುಷೋತ್ತಮ್ ಭಂಡಾರಿ:
ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ ಮಾತನಾಡಿ, ಕರಾವಳಿ ಮೂಲದಲ್ಲಿ ಸಮಾನ ಮನಸ್ಕರು ಒಟ್ಟು ಸೇರಿ ಈ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅನ್ನು ಹುಟ್ಟು ಹಾಕಿರುವುದಾಗಿದೆ. ಪ್ರಸ್ತುತ ಈ ಪಟ್ಲ ಫೌಂಡೇಶನ್ ಭಾರತದಲ್ಲೂ ಮಾತ್ರವಲ್ಲ ದೇಶ-ವಿದೇಶಗಳಲ್ಲೂ ಜನಪ್ರಿಯತೆ ಗಳಿಸಿದೆ. ಯಕ್ಷ ಕಲೆ ಎನ್ನುವುದು ಪರಿಪೂರ್ಣ ಶ್ರೇಷ್ಟ ಕಲೆ. ಈ ಕಲೆಯು ಭಾರತದ ಆರು ರಾಜ್ಯಗಳಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲೂ ನೆಲೆ ನಿಂತಿದೆ ಎಂದರು.

ನನ್ನನ್ನು ಗುರುತಿಸಿ ಸನ್ಮಾನಿಸಿರುವುದು ಕಲಾ ಮಾತೆಗೆ ಕೊಟ್ಟ ಗೌರವ-ಕೆ.ಎಚ್ ದಾಸಪ್ಪ ರೈ:
ಜನಪ್ರಿಯ ಹಿರಿಯ ಯಕ್ಷಗಾನ ಕಲಾವಿದ ಕೆ.ಎಚ್ ದಾಸಪ್ಪ ರೈ ಮಾತನಾಡಿ, ದಾಸಪ್ಪ ರೈ ಓರ್ವ ಮನುಷ್ಯ. ನಾನೂ ಏನೂ ಮಾಡಲಿಲ್ಲ. ಆದರೆ1965ನೇ ಇಸವಿಯಿಂದ ಇಂದಿನ ತನಕ ಯಕ್ಷಗಾನ ರಂಗದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ಸನ್ಮಾನಿಸಿರುವುದು ಆ ಕಲಾ ಮಾತೆಗೆ ಕೊಟ್ಟ ಗೌರವವಾಗಿದೆ. ಯಕ್ಷಗಾನ ಕ್ಷೇತ್ರದಲ್ಲಿ ಎಂದಿಗೂ ಅಪಚಾರ ಮಾಡದೆ ಗೌರವ ಕೊಟ್ಟಿದ್ದೇನೆ ಎನ್ನುವ ಆತ್ಮತೃಪ್ತಿ ನನಗಿದೆ. ಉತ್ಸಾಹಿ ಕಲಾವಿದ ಪಟ್ಲ ಸತೀಶ್ ಶೆಟ್ಟಿರವರು ಯಕ್ಷರಂಗದಲ್ಲಿ ಮಾಡಿದ ಕೆಲಸ ಅನನ್ಯ. ನನ್ನಂತಹ ಅದೆಷ್ಟೋ ಕಲಾವಿದರಿಗೆ ಸಹಾಯಹಸ್ತ ನೀಡಿದ ವ್ಯಕ್ತಿಯಾಗಿದ್ದಾರೆ ಎಂದರು.

ದಾಸಪ್ಪ ರೈಯವರ ಸಾಧನೆ ಯುವಕರಿಗೆ ಅನುಕರಣೀಯ-ದುರ್ಗಾಪ್ರಸಾದ್ ರೈ:
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈವರು ಸನ್ಮಾನಿತ ಜನಪ್ರಿಯ ಹಿರಿಯ ಯಕ್ಷಗಾನ ಕಲಾವಿದ ಕೆ.ಎಚ್ ದಾಸಪ್ಪ ರೈರವರ ಕುರಿತು ಮಾತನಾಡಿ, ದಾಸಪ್ಪ ರೈಯವರು ಕನ್ನಡ ಹಾಗೂ ತುಳು ಯಕ್ಷಗಾನವನ್ನು ವೃತ್ತಿಯಾಗಿಸಿಕೊಂಡು ಬೆಳೆದ ಪರಿ ಅನುಕರಣೀಯ. ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿ ನಿರಂತರವಾಗಿ ಯಕ್ಷರಂಗದಲ್ಲಿ ಮಿಂಚಿದ್ದು ಯುವಕರಿಗೆ ಇದು ಅನುಕರಣೀಯ ನಡೆಯಾಗಿದೆ. ಯಕ್ಷರಂಗದಲ್ಲಿ ಅವರ ಸಾಧನೆಗೆ ಅನೇಕ ಗೌರವ ಸಮ್ಮಾನಗಳು ದೊರಕಿದೆ ಎಂದರು.

ವೇದಿಕೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಗೌರವ ಸಲಹೆಗಾರ ಅರಿಯಡ್ಕ ಚಿಕ್ಕಪ್ಪ ನಾಯ್ಕ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ, ಕೋಶಾಧಿಕಾರಿ ಸುದೇಶ್ ಕುಮಾರ್ ರೈಯವರು ಉಪಸ್ಥಿತರಿದ್ದರು. ಪ್ರೊ|ದತ್ತಾತ್ರೇಯ ರಾವ್ ಪ್ರಾರ್ಥಿಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ ನಿರ್ಗಮನ ಅಧ್ಯಕ್ಷ ನೋಣಾಲು ಜೈರಾಜ್ ಭಂಡಾರಿ ಸ್ವಾಗತಿಸಿ, ನೂತನ ಕಾರ್ಯದರ್ಶಿ ಚಂದ್ರಹಾಸ ರೈ ಬೊಳಿಕ್ಕಳ ವಂದಿಸಿದರು. ಪ್ರಧಾನ ಸಂಚಾಲಕ ಪ್ರಶಾಂತ್ ರೈ ಮುಂಡಾಳಗುತ್ತು ಕಾರ್ಯಕ್ರಮ ನಿರೂಪಿಸಿದರು.

ಪದ ಪ್ರದಾನ..
2023-24ನೇ ಸಾಲಿನ ನೂತನ ಪದಾಧಿಕಾರಿಗಳಾದ ಗೌರವಾಧ್ಯಕ್ಷ ಸವಣೂರು ಸೀತಾರಾಮ ರೈ, ಅಧ್ಯಕ್ಷ ಕರುಣಾಕರ್ ರೈ ದೇರ್ಲ, ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ರೈ ಬೊಳಿಕ್ಕಳ, ಕೋಶಾಧಿಕಾರಿ ಉದಯ ವೆಂಕಟೇಶ, ಪ್ರಧಾನ ಸಂಚಾಲಕ ಪ್ರಶಾಂತ್ ರೈ ಮುಂಡಾಳಗುತ್ತು, ಉಪಾಧ್ಯಕ್ಷರುಗಳಾದ ಡಾ.ಅಶೋಕ್ ಪಡಿವಾಳ್, ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಶ್ರೀಮತಿ ಹರಿಣಾಕ್ಷಿ ಜೆ.ಶೆಟ್ಟಿ, ಸಮಿತಿ ಸದಸ್ಯರುಗಳಾದ ಎಂ.ಗಂಗಾಧರ ರೈ, ಎಂ.ಆರ್ ಜಯಕುಮಾರ್ ರೈ, ರಾಕೇಶ್ ರೈ ಕೆಡೆಂಜಿ, ದತ್ತಾತ್ರೇಯ ರಾವ್, ಎಂ.ಸಂಕಪ್ಪ ರೈ, ಡಿ.ಗಣೇಶ್ ರೈ, ಸುಬ್ಬಪ್ಪ ಕೈಕಂಬ, ಡಾ|ರಾಜೇಶ್ ಬೆಜ್ಜಂಗಳ, ಶ್ರೀಮತಿ ಅನ್ನಪೂರ್ಣ ರಾವ್, ಗೌರವ ಸಲಹೆಗಾರರಾದ ಅರಿಯಡ್ಕ ಚಿಕ್ಕಪ್ಪ ನಾಯ್ಕ್, ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ, ಶಶಿಕುಮಾರ್ ರೈ ಬಾಲ್ಯೊಟ್ಟು, ನೋಣಾಲು ಜೈರಾಜ್ ಭಂಡಾರಿ, ಎ.ಜಗಜ್ಜೀವನ್ ದಾಸ್ ರೈ, ಕೆ.ಎಚ್ ದಾಸಪ್ಪ ರೈ, ಚಂದ್ರಹಾಸ ರೈ ತುಂಬೆಕೋಡಿರವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಮಾತೃ ಘಟಕದ ಅಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿರವರು ಹೂಗುಚ್ಛ ನೀಡುವ ಮೂಲಕ ಪದ ಪ್ರದಾನವನ್ನು ನೆರವೇರಿಸಿದರು.

ನೂತನ ಅಧ್ಯಕ್ಷರಿಂದ ಅಭಿನಂದನೆ..
ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ನೂತನ ಅಧ್ಯಕ್ಷರಾದ ಕರುಣಾಕರ್ ರೈ ದೇರ್ಲ ದಂಪತಿರವರಿಂದ ಪಟ್ಲ ಸತೀಶ್ ಶೆಟ್ಟಿರವರಿಗೆ ಹೂಗುಚ್ಛ ನೀಡುವ ಮೂಲಕ ಅಭಿನಂದಿಸಲಾಯಿತು.

ಸನ್ಮಾನ..
ಕಾರ್ಯಕ್ರಮದಲ್ಲಿ ಜನಪ್ರಿಯ ಹಿರಿಯ ಯಕ್ಷಗಾನ ಕಲಾವಿದ ಕೆ.ಎಚ್ ದಾಸಪ್ಪ ರೈಯವರಿಗೆ ಗೌರವ ಸನ್ಮಾನ ಪಟ್ಲ ಸತೀಶ್ ಶೆಟ್ಟಿರವರ ನೇತೃತ್ವದಲ್ಲಿ ಜರಗಿತು.

ಶ್ರದ್ಧಾಂಜಲಿ..
ಈ ಸಂದರ್ಭದಲ್ಲಿ ಇತ್ತೀಚೆಗೆ ಅಗಲಿದ ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ದಿ.ಪೆರುವೋಡಿ ನಾರಾಯಣ ಭಟ್‌ರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಗಿದ್ದು, ಸಮಿತಿ ಸದಸ್ಯ ಎಂ.ಗಂಗಾಧರ್ ರೈಯವರು ನುಡಿನಮನ ಸಲ್ಲಿಸಿದರು.

ಪಟ್ಲ ಫೌಂಡೇಶನ್‌ನ ಉನ್ನತಿಗೋಸ್ಕರ ದುಡಿಯಲಿದ್ದೇನೆ…
ಪಟ್ಲ ಸತೀಶ್ ಶೆಟ್ಟಿಯವರು ಓರ್ವ ಅಸಾಮಾನ್ಯ ವ್ಯಕ್ತಿ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮೂಲಕ ಯಕ್ಷಗಾನ ಕಲೆಯನ್ನು ಇಂದು ಭಾರತದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲೂ ಛಾಪು ಮೂಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಹಕಾರ ರತ್ನ ಸೀತಾರಾಮ್ ರೈಯವರ ಗೌರವಾಧ್ಯಕ್ಷತೆಯಲ್ಲಿ, ಎಲ್ಲರ ಸಹಕಾರದೊಂದಿಗೆ ಪಟ್ಲ ಫೌಂಡೇಶನ್‌ನ ಉನ್ನತಿಗೋಸ್ಕರ ದುಡಿಯಲಿದ್ದೇನೆ.
-ಕರುಣಾಕರ್ ರೈ ದೇರ್ಲ, ಅಧ್ಯಕ್ಷರು, ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕ

Source: puttur.suddinews.com

LATEST POST
ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ - 2025 ರಾಷ್ಟ್ರೀಯ ಕಲಾ ಸಮ್ಮೇಳನ ದಿನಾಂಕ ▪️ 01.06.2025 ಆದಿತ್ಯವಾರ ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು ಆಮಂತ್ರಣ ಪತ್ರಿಕೆ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕವು ಮೇ 10, 2025 ರಂದು ಜರ್ಮನಿಯ ಅಲ್ಸ್ಬಾಕ್‌ನಲ್ಲಿ "ಭಾರತ್ ಕಲಾ ವೈಭವ" ಸಾಂಸ್ಕೃತಿಕ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಾಂಸ್ಕೃತಿಕ ಉತ್ಸವವು ನಮ್ಮ ಫೌಂಡೇಶನ್‌ಗಾಗಿ ಹೆಮ್ಮೆಗುರಿಯಾಗಿದೆ, ಯಾಕಂದರೆ ಇದು ಭಾರತದ ಕಲೆಗಳು ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಯೂರೋಪಿನ...

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ...

A New Beginning: Housewarming Held for 36th Artist Home by Patla Foundation

ಬೇಬಿ ಮತ್ತು ಬಾಲಕೃಷ್ಣ ಪುರುಷ ರಿಗೆ ಪಟ್ಲ ಯಕ್ಷಾಶ್ರಯದ 36ನೇ ಮನೆ

Mangaluru News: ಹಲವು ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವ ಪಟ್ಲ ಫೌಂಡೇಶನ್‌ ವತಿಯಿಂದ, ಇನ್ನೋರ್ವ ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ವಿಶೇಷ ಅಂದ್ರೆ ಇದು ಪಟ್ಲ ಫೌಂಡೇಶನ್‌ ವತಿಯಿಂದ ಕಲಾವಿದರಿಗೆ ನೀಡುತ್ತಿರುವ 36ನೇ ಮನೆಯಾಗಿದೆ. ಬೇಬಿ ಮತ್ತು ಬಾಲಕೃಷ್ಣ ಪುರುಷ ಎಂಬುವವರಿಗೆ ಪರುವಾಯಿಯ ಓಣಿ ಬಾಗಿಲು...

With 36 Homes Delivered, Patla Foundation Breaks Ground on 20 More for Artists

ಪಟ್ಲ ಯಕ್ಷಾಶ್ರಯದಡಿ 20 ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಶೃಂಗೇರಿ ಶ್ರೀಗಳು

Mangaluru News: ಎಷ್ಟೋ ಯಕ್ಷಗಾನ ಕಲಾವಿದರಿಗೆ ಪಟ್ಲ ಯಕ್ಷಾಶ್ರಯದಡಿ ಹಲವು ಮನೆಗಳನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಟ್ಟಿ ಕೊಟ್ಟಿದ್ದಾರೆ. ಅದೇ ರೀತಿ, ಉಡುಪಿಯಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಹಲವು ಯಕ್ಷಗಾನ ಕಲಾವಿದರಿಗಾಗಿ ಮನೆ ನಿರ್ಮಿಸಲು ಭಾಗವತರು ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ 36 ಮನೆಗಳನ್ನು...

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಬಹ್ರೈನ್ – ಯಕ್ಷಧ್ರುವ ಪಟ್ಲ ಫೌಂಡೇಶನ್ ಬಹ್ರೈನ್ ಮತ್ತು ಸೌದಿ ಘಟಕವು ತಮ್ಮ ಮೂರನೇ ವಾರ್ಷಿಕ ರಕ್ತದಾನ ಶಿಬಿರವನ್ನು ಸಲ್ಮಾನಿಯಾ ಮೆಡಿಕಲ್ ಕಾಂಪ್ಲೆಕ್ಸ್‌ನ ಸೆಂಟ್ರಲ್ ಬ್ಲಡ್ ಬ್ಯಾಂಕ್‌ನಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಸಂಜೆ 7:00 ಗಂಟೆಯಿಂದ ರಾತ್ರಿ 11:30ರವರೆಗೆ ನಡೆದ ಈ ಶಿಬಿರದಲ್ಲಿ 80 ಕ್ಕೂ ಹೆಚ್ಚು ದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು.

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿದೆ. ಇದು ಬಹಳ ಸಂತಸದ ವಿಚಾರ. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜೊತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಇಂತಹ ಸಂಘಟನೆ ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.