ಬಹರೈನ್‌ನಲ್ಲಿ ಪಟ್ಲ ಫೌಂಡೇಶನ್ 4ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಹರೈನ್ ಮತ್ತು ಸೌದಿ ಘಟಕದ ನಾಲ್ಕನೇ ವಾರ್ಷಿಕೋತ್ಸವ ಸಂಭ್ರಮ ನವೆಂಬರ್ 1ರಂದು ಬಹರೈನ್ ಮನಾಮದ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಬಹಳ ಅದ್ಧೂರಿಯಾಗಿ ನಡೆಯಿತು.

ಘಟಕದ ಖಜಾಂಚಿ ನವೀನ್ ಭಂಡಾರಿಯವರು ಬಂದ ಅತಿಥಿಗಳನ್ನು ಆದರದಿಂದ ಸ್ವಾಗತಿಸಿದರು. ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪಟ್ಟ ಸತೀಶ್ ಶೆಟ್ಟಿ, ಬಹರೈನ್ ಮತ್ತು ಸೌದಿ ಘಟಕದ ಅಧ್ಯಕ್ಷ ನರೇಂದ್ರ ಶೆಟ್ಟಿ, ಘಟಕದ ಗೌರವ ಅಧ್ಯಕ್ಷ ಮತ್ತು ಮುಖ್ಯ ಅತಿಥಿ ಸುಭಾಷ್ ಚಂದ್ರ, ಘಟಕದ ಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ, ಕನ್ನಡದ ಸಂಘ ಬಹರೈನ್ ಇದರ ಅಧ್ಯಕ್ಷ ಅಮರನಾಥ್ ರೈ, ಮಂಗಳೂರು ಅಸೋಸಿಯೇಷನ್ ಸ‍್ವದಿ ಆರೇಬಿಯಾ ಇದರ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಮತ್ತು ಇತರ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.

ಕಾರ್ಯಕ್ರಮದ ಪ್ರಧಾನ ಅಂಗವಾಗಿ ಯಕ್ಷಗುರು ದೀಪಕ್ ರಾವ್ ಪೇಜಾವರ್ ನಿರ್ದೇಶನದ ‘ಚಕ್ರವ್ಯೂಹ’ ಎಂಬ ಯಕ್ಷಗಾನ ಕಥಾ ಪ್ರಸಂಗವನ್ನು ನಾಡಿನಿಂದ ಬಂದ ಅತಿಥಿ ಕಲಾವಿದರು ಮತ್ತು ಬಹರೈನ್ ಮತ್ತು ಸೌದಿ ಅರೇಬಿಯಾದ ಕಲಾವಿದರು ಜೊತೆಗೂಡಿ ಆಡಿ ತೋರಿಸಿದರು. ಯಕ್ಷಗಾನದ ಮುಖ್ಯ ಆಕರ್ಷಣೆ ನಾಡಿನಿಂದ ಆಗಮಿಸಿದ ಖ್ಯಾತ ಪುಂಡು ವೇಷದಾರಿ ದಿವಾಕರ್‌ ರೈ ಸಂಪಾಂಜೆ ಅವರ ಅಭಿಮನ್ಯು ಪಾತ್ರವಾಗಿತ್ತು. ಪಟ್ಟ ಸತೀಶ್ ಶೆಟ್ಟಿ ಮತ್ತು ಸೌದಿ ಅರೇಬಿಯಾದ ರೋಷನ್ ಕೋಟ್ಯಾನ್ ಅವರ ಭಾಗವತಿಕೆ ಕೂಡ ನಡೆಯಿತು.

ಈ ಮನಮೋಹಕ ಯಕ್ಷಗಾನ ಪ್ರದರ್ಶನದ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಖ್ಯಾತ ಯಕ್ಷಗಾನ ಕಲಾವಿದ ಮತ್ತು ಯಕ್ಷಗುರು ದೀಪಕ್ ರಾವ್ ಪೇಜಾವರ್ ಅವರು ನಡೆಸಿಕೊಟ್ಟರು.

ಪ್ರಾಸ್ತಾವಿಕ ಭಾಷಣ ಮಾಡಿದ ಘಟಕದ ಅಧ್ಯಕ್ಷರಾದ ನರೇಂದ್ರ ಶೆಟ್ಟಿ ಅವರು ಮಾತನಾಡುತ್ತಾ ನಮ್ಮ ಘಟಕವು ಮಾತ್ರ ಸಂಸ್ಥೆಯ ಸೇವಾ ಕಾರ್ಯಕ್ರಮಗಳಿಂದ ಸ್ಪೂರ್ತಿಗೊಂಡು ಬಹರೈನ್‌ನಲ್ಲಿ ಯಶಸ್ವಿ ರಕ್ತದಾನ ಶಿಬಿರವನ್ನು ನಡೆಸಿ ಕರ್ಮಭೂಮಿಯ ಸೇವೆಯನ್ನು ಮಾಡಿದೆ. ಇಂದು ಮಾತೃಸಂಘದ ಜೊತೆಗೂಡಿ ಹಲವು ಅಶಕ್ತ ಕಲಾವಿದರ ಸೇವೆಯನ್ನು ಮಾಡಲಿದೆ. ಈವಾಗ ಯಕ್ಷಗಾನವನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಈ ಪರಿವರ್ತನೆಗೆ ಮುಖ್ಯ ಕಾರಣಿಭೂತರು ಸತೀಶಣ್ಣ ಮತ್ತೆ ಪಟ್ಲ ಫೌಂಡೇಷನ್ ಎಂದು ಹೇಳಿದರೆ ತಪ್ಪಾಗಲಾರದು. ಅವರು ಯಕ್ಷಗಾನವನ್ನು ಒಂದು ಉನ್ನತ ಕಲಾಪ್ರದರ್ಶನದ ರೂಪದಲ್ಲಿ ವಿಶ್ವದಾದ್ಯಂತ ಬಿಂಬಿಸಿ ಪ್ರದರ್ಶಿಸುವುದರಲ್ಲಿ ಸಫಲರಾಗಿದ್ದಾರೆ. ಅದರ ಪರಿಕ್ರಮದ ಪ್ರತಿಫಲ ನಮಗೆ ಸಿಗುತ್ತಿದೆ ಎಂದರು.

ಮುಖ್ಯ ಅತಿಥಿಗಳಾದ ಸುಭಾಷ್ ಚಂದ್ರ ಮಾತನಾಡಿ ‘ಸತೀಶಣ್ಣ ಸರಳ ಸಜ್ಜನಿಕೆಯ ಜೀವನವನ್ನು ನಡೆಸಿಕೊಂಡು ಪರೋಪಕಾರವನ್ನು ಮಾಡುತ್ತಾ ವಿಶ್ವದಾದ್ಯಂತ ಹೆಸರುವಾಸಿ ಆಗಿದ್ದಾರೆ. ಸತೀಶಣ್ಣ ಮತ್ತು ಅವರ ಪಟ್ಲ ಫೌಂಡೇಶನ್ ಗೆ ನಮ್ಮ ಘಟಕದ ಸಮರ್ಥನೆ ಯಾವಾಗಲೂ ಇದೆ ಎಂದರು.

ಪಟ್ಟ ಸತೀಶ್ ಶೆಟ್ಟಿಯವರು ಮಾತನಾಡಿ ‘ಪಟ್ಲ ಫೌಂಡೇಶನ್ ಕಳೆದ 10 ವರ್ಷಗಳಿಂದ ಅಸಕ್ತ ಕಲಾವಿದರ ಸೇವೆಯನ್ನು ಮಾಡುತ್ತಾ ಬಂದಿದೆ. ಎಲ್ಲರ ಸಹಯೋಗದೊಂದಿಗೆ ಆ ಕೆಲಸವನ್ನು ಮುಂದುವರಿಸುತ್ತೇವೆ ಎಂದು ಹೇಳಿದರು ಮತ್ತು ಬಹರಿನ್ ಮತ್ತು ಸೌದಿ ಘಟಕವು ಮಾತೃಸಂಸ್ಥೆಗೆ ನೀಡುವ ಸಹಯೋಗಕ್ಕೆ ಸಂತೋಷವನ್ನು ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಸಮಾರಂಭದ ಅಧ್ಯಕರಾದ ಪಟ್ಲ ಸತೀಶ್ ಶೆಟ್ಟಿ ಮುಖ್ಯ ಅತಿಥಿಗಳಾದ ಸುಭಾಷ್ ಚಂದ್ರ, ಯಕ್ಷ ಪೋಷಕ ಮತ್ತು ಸೆಂಟ್ರಲ್ ಕೆಫೆ ಪ್ರಕಾಶ್ ಶೆಟ್ಟಿ,  ಘಟಕದ ಅಧ್ಯಕ್ಷ ನರೇಂದ್ರ ಶೆಟ್ಟಿ, ಭಾಗವತ ರೋಷನ್ ಕೋಟ್ಯಾನ್ ಅವರ ಪೋಷಕರಿಗೆ ಮತ್ತು ಅತಿಥಿ ಕಲಾವಿದ ದಿವಾಕರ್ ರೈ  ಸಂಪಾಂಜೆ ಇವರಿಗೆ ಶಾಲು ಹೊದಿಸಿ, ಫಲಪುಷ್ಪ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಕಲಾವಿದ ದಿವಾಕರ್ ರೈ ಸಂಪಾಂಜೆ ಇವರಿಗೆ ‘ದಿಗಿಣ ಚತುರ’ ಎಂಬ ಬಿರುದನ್ನು ನೀಡಿ ಸನ್ಮಾನಿಸಲಾಯಿತು. ಘಟಕದ ವತಿಯಿಂದ ಯಕ್ಷ ಆಶ್ರಯ ಯೋಜನೆ ಅಡಿಯಲ್ಲಿ ಬಡ ಕಲಾವಿದವರಿಗೆ ಒಂದು ಮನೆಯನ್ನು ಕಟ್ಟಿಕೊಡಲು ರೂ.5 ಲಕ್ಷಗಳ ದೇಣಿಗೆಯನ್ನು ನೀಡಲಾಯಿತು. ಘಟಕದ ಅಧ್ಯಕ್ಷ ನರೇಂದ್ರ ಶೆಟ್ಟಿ ಅವರ ವತಿಯಿಂದ ಏಳು ಆಸಕ್ತ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ಕಲಾವಿದರ ಸಹಾಯಕ್ಕಾಗಿ ಪಟ್ಲ ಸಂಭ್ರಮ 2024 ರೂ.1 ಲಕ್ಷ ದೇಣಿಗೆಯನ್ನು ನೀಡಲಾಯಿತು. ನರೇಂದ್ರ ಶೆಟ್ಟಿ ನವೀನ್ ಭಂಡಾರಿ ಮತ್ತು ಗೋಪಾಲ್ ಶೆಟ್ಟಿ ಅವರ ವತಿಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಲಾಯಿತು. ಘಟಕದ ಕಾರ್ಯದರ್ಶಿ ಮೋಹನ್ ಎಡಿನೀರ್ ಅವರು ಎಲ್ಲಾ ಯಕ್ಷಗಾನ ಪ್ರಿಯರಿಗೆ, ಯಕ್ಷಗಾನ ಕಲಾಪೋಷಕರಿಗೆ, ಯಕ್ಷಗಾನ ಕಲಾವಿದರಿಗೆ ಮತ್ತು ಸ್ವಯಂಸೇವಕರಿಗೆ ಧನ್ಯವಾದವನ್ನು ಸಮರ್ಪಿಸಿದರು. ಈ ಸಮಾರಂಭದಲ್ಲಿ ಘಟಕದ ಪದಾಧಿಕಾರಿಗಳು, ಕಾರ್ಯಕಾರಿಣಿ ಸಮಿತಿ ಮತ್ತು ಸರ್ವ ಸದಸ್ಯರು ಪಾಲ್ಗೊಂಡಿದ್ದರು. ಸಮಾರಂಭದ ಅನ್ನದಾನದ ವ್ಯವಸ್ಥೆಯನ್ನು ಸೆಂಟ್ರಲ್ ಕೆಫೆ ಪ್ರಕಾಶ್ ಶೆಟ್ಟಿ ಅವರು ತಮ್ಮ ವತಿಯಿಂದ ಏರ್ಪಡಿಸಿದ್ದರು.

LATEST POST
ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ - 2025 ರಾಷ್ಟ್ರೀಯ ಕಲಾ ಸಮ್ಮೇಳನ ದಿನಾಂಕ ▪️ 01.06.2025 ಆದಿತ್ಯವಾರ ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು ಆಮಂತ್ರಣ ಪತ್ರಿಕೆ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕವು ಮೇ 10, 2025 ರಂದು ಜರ್ಮನಿಯ ಅಲ್ಸ್ಬಾಕ್‌ನಲ್ಲಿ "ಭಾರತ್ ಕಲಾ ವೈಭವ" ಸಾಂಸ್ಕೃತಿಕ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಾಂಸ್ಕೃತಿಕ ಉತ್ಸವವು ನಮ್ಮ ಫೌಂಡೇಶನ್‌ಗಾಗಿ ಹೆಮ್ಮೆಗುರಿಯಾಗಿದೆ, ಯಾಕಂದರೆ ಇದು ಭಾರತದ ಕಲೆಗಳು ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಯೂರೋಪಿನ...

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ...

A New Beginning: Housewarming Held for 36th Artist Home by Patla Foundation

ಬೇಬಿ ಮತ್ತು ಬಾಲಕೃಷ್ಣ ಪುರುಷ ರಿಗೆ ಪಟ್ಲ ಯಕ್ಷಾಶ್ರಯದ 36ನೇ ಮನೆ

Mangaluru News: ಹಲವು ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವ ಪಟ್ಲ ಫೌಂಡೇಶನ್‌ ವತಿಯಿಂದ, ಇನ್ನೋರ್ವ ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ವಿಶೇಷ ಅಂದ್ರೆ ಇದು ಪಟ್ಲ ಫೌಂಡೇಶನ್‌ ವತಿಯಿಂದ ಕಲಾವಿದರಿಗೆ ನೀಡುತ್ತಿರುವ 36ನೇ ಮನೆಯಾಗಿದೆ. ಬೇಬಿ ಮತ್ತು ಬಾಲಕೃಷ್ಣ ಪುರುಷ ಎಂಬುವವರಿಗೆ ಪರುವಾಯಿಯ ಓಣಿ ಬಾಗಿಲು...

With 36 Homes Delivered, Patla Foundation Breaks Ground on 20 More for Artists

ಪಟ್ಲ ಯಕ್ಷಾಶ್ರಯದಡಿ 20 ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಶೃಂಗೇರಿ ಶ್ರೀಗಳು

Mangaluru News: ಎಷ್ಟೋ ಯಕ್ಷಗಾನ ಕಲಾವಿದರಿಗೆ ಪಟ್ಲ ಯಕ್ಷಾಶ್ರಯದಡಿ ಹಲವು ಮನೆಗಳನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಟ್ಟಿ ಕೊಟ್ಟಿದ್ದಾರೆ. ಅದೇ ರೀತಿ, ಉಡುಪಿಯಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಹಲವು ಯಕ್ಷಗಾನ ಕಲಾವಿದರಿಗಾಗಿ ಮನೆ ನಿರ್ಮಿಸಲು ಭಾಗವತರು ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ 36 ಮನೆಗಳನ್ನು...

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಬಹ್ರೈನ್ – ಯಕ್ಷಧ್ರುವ ಪಟ್ಲ ಫೌಂಡೇಶನ್ ಬಹ್ರೈನ್ ಮತ್ತು ಸೌದಿ ಘಟಕವು ತಮ್ಮ ಮೂರನೇ ವಾರ್ಷಿಕ ರಕ್ತದಾನ ಶಿಬಿರವನ್ನು ಸಲ್ಮಾನಿಯಾ ಮೆಡಿಕಲ್ ಕಾಂಪ್ಲೆಕ್ಸ್‌ನ ಸೆಂಟ್ರಲ್ ಬ್ಲಡ್ ಬ್ಯಾಂಕ್‌ನಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಸಂಜೆ 7:00 ಗಂಟೆಯಿಂದ ರಾತ್ರಿ 11:30ರವರೆಗೆ ನಡೆದ ಈ ಶಿಬಿರದಲ್ಲಿ 80 ಕ್ಕೂ ಹೆಚ್ಚು ದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು.

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿದೆ. ಇದು ಬಹಳ ಸಂತಸದ ವಿಚಾರ. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜೊತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಇಂತಹ ಸಂಘಟನೆ ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.