ಕಾರ್ಕಳ ಘಟಕದ ಒಂಬತ್ತನೇ ‘ಪಟ್ಲ ಸಂಭ್ರಮೋತ್ಸವ’

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ “ಪಟ್ಲ ಸಂಭ್ರಮೋತ್ಸವ” ಹಾಗೂ ಯಕ್ಷಕಲಾರಂಗ (ರಿ) ಕಾರ್ಕಳ ಇದರ 12ನೇ ವಾರ್ಷಿಕೋತ್ಸವವು ಪಟ್ಲ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಕಾರ್ಕಳ ಮಾರಿಗುಡಿ ವಠಾರದಲ್ಲಿ ನಡೆಯಿತು. ಗೋವಾ ಘಟಕದ ಅಧ್ಯಕ್ಷರಾದ ಉದ್ಯಮಿ ಗಣೇಶ್ ಶೆಟ್ಟಿ, ರಶ್ಮಿ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ಅಧ್ಯಕ್ಷರಾದ ಡಿ. ಆರ್.ರಾಜು ಇವರ ಗೌರವ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
