Skip to main content

yakshadhruvapatlafoundation.org

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ ಪಾಾಲನೆಯಿಂದ ಮುಕ್ತಾಯವಾಯಿತು. ಈ ಬಾರಿ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ, ಯಕ್ಷಗಾನ ಕಾರ್ಯಕ್ರಮ ಸೇರಿದಂತೆ ಈ ವರ್ಷ ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಕಾರಣಕ್ಕೆ ಭರತನಾಟ್ಯ, […]

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025 ರಾಷ್ಟ್ರೀಯ ಕಲಾ ಸಮ್ಮೇಳನ ದಿನಾಂಕ ▪️ 01.06.2025 ಆದಿತ್ಯವಾರ ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು ಆಮಂತ್ರಣ ಪತ್ರಿಕೆ  

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟರು, ಈ ಬಾರಿ ದಶಮದ ಸಂಭ್ರಮದ ಕಾರಣ, ದಾನಿಗಳಿಂದ, ಕಲಾಭಿಮಾನಿಗಳಿಂದ 10 ಕೋಟಿ ರೂ. ದೇಣಿಗೆ ಸಂಗ್ರಹದ ಗುರಿ ಹೊಂದಿದ್ದೇವೆ. […]

ಯಕ್ಷಗಾನ ಕಲಾವಿದರಿಗೆ ಗೌರವಾರ್ಪಣೆ

ಯಕ್ಷಮಿತ್ರರು ಅಸೈಗೋಳಿ ಇದರ ವತಿಯಿಂದ ಅಸೈಗೋಳಿಯಲ್ಲಿ ಸೋಮವಾರ ನಡೆದ ಪಾವಂಜೆ ಮೇಳದ ಐದನೇ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಕಲಾವಿದರಾದ ಪಟ್ಲ ಸತೀಶ್ ಶೆಟ್ಟಿ ದಿವಾಣ ಶಿವಶಂಕರಭಟ್, ಸುಭ್ರಾಯ ಹೊಳ್ಳ ಕಾಸರಗೋಡು, ಮಾಧವ ಬಂಗೇರ ಕೊಳತ್ತಮಜಲು, ರಘು ಶೆಟ್ಟಿ ನಾಳ ಹಾಗೂ ಅಸೈಗೋಳಿಯ ಉದಯ ಭಟ್ ಅವರನ್ನು ಗೌರವಿಸಿ ಸಮ್ಮಾನಿಸಲಾಯಿತು.

ಯಕ್ಷಧ್ರುವ ಪಟ್ಲ ಫೌಂಡೇಶನ್: ಕಲಾವಿದನಿಗೆ ಧನಸಹಾಯ

ಕಳೆದ 35 ವರ್ಷಕ್ಕೂ ಮಿಕ್ಕಿ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಾ ಅನಾರೋಗ್ಯಕ್ಕೊಳಗಾಗಿರುವ ಕಲಾವಿದರಾದ ಶ್ರೀ ನಾಗೇಶ್ ಆಚಾರ್ಯ ಕುಲಶೇಖರ ಇವರ ಮನೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಇಂದು ಭೇಟಿ ನೀಡಿ ಆರೋಗ್ಯಕ್ಷೇಮ ವಿಚಾರಿಸಿ ಫೌಂಡೇಶನ್ ನ ವತಿಯಿಂದ ಧನಸಹಾಯ ನೀಡಿದರು.

‘ತ್ರಿಜನ್ಮ ಮೋಕ್ಷ’ ಯಕ್ಷಗಾನ ಬಯಲಾಟದಲ್ಲಿ ಪಟ್ಲ ಫೌಂಡೇಶನಿಗೆ ನೆನಪಿನ ಕಾಣಿಕೆ

ಜಪ್ಪು ಮಜಿಲ ಹತ್ತು ಸಮಸ್ತರ ವತಿಯಿಂದ ಮಂಗಳಾದೇವಿ ದೇವಸ್ಥಾನದ ಎದುರುಗಡೆ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಯವರಿಂದ ‘ತ್ರಿಜನ್ಮ ಮೋಕ್ಷ’ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ರೂ. ಒಂದು ಲಕ್ಷ ಮೊತ್ತದ ಚೆಕ್‌ನ್ನು ಹಾಗೂ 2 ಬೆಳ್ಳಿಯ ದೀಪವನ್ನು ಮೇಳದ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ ಇವರಿಗೆ ನೀಡಲಾಯಿತು.

ಪಟ್ಲ ಯಕ್ಷಾಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ರೂ. 25 ಲಕ್ಷ ಅನುದಾನ ವಿತರಣೆ

ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಾಶ್ರಯ ಯೋಜನೆಯಡಿ ಗೃಹ ನಿರ್ಮಾಣಕ್ಕಾಗಿ ವಿವಿಧ ಯಕ್ಷಗಾನ ಮೇಳಗಳ ಕಲಾವಿದರಿಗೆ ಹಾಗೂ ದೈವಾರಾದನೆಯ ಪರಿಚಾರಕರಿಗೆ ರೂ. 25 ಲಕ್ಷದ ಮೊತ್ತದ ಚೆಕ್ಕುಗಳನ್ನು ಇಂದು ಟ್ರಸ್ಟಿನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ ಇವರ ಕಚೇರಿಯಲ್ಲಿ 16 ಮಂದಿ ಫಲಾನುಭವಿಗಳಿಗೆ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಹಾಗೂ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ವಿತರಿಸಿದರು.

ಮಂಗಳೂರು ಮಹಾನಗರ ಪಾಲಿಕೆಯಿಂದ ಯಕ್ಷಧ್ರುವ ಪಟ್ಲ ಫೌಂಡೇಶನಿಗೆ ರೂ. 10 ಲಕ್ಷ ಫ್ರೋತ್ಸಾಹಧನ ವಿತರಣೆ

ಮಂಗಳೂರು ಮಹಾಪಾಲಿಕೆಯ ವತಿಯಿಂದ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುವ ವಿಶೇಷ ಕಾರ್ಯಕ್ರಮದಡಿ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವನ್ನು ಸರಕಾರಿ ಶಾಲೆಗಳಲ್ಲಿ ಉಚಿತವಾಗಿ ಕಲಿಸುವ ನಿಟ್ಟಿನಲ್ಲಿ ಯಕ್ಷಗಾನ ತರಬೇತಿ ತರಗತಿಗಳನ್ನು ರಾಜ್ಯದ್ಯಂತ ನಡೆಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಗಾನಂ ವಿಶ್ವಗಾನಂ ಯೋಜನೆಯಡಿ 2024-25ನೇ ಸಾಲಿನ ಬಜೆಟಿನಲ್ಲಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಸ್ಟಾಯೀ ಸಮಿತಿ ಅಧ್ಯಕ್ಷ ವರುಣ್ ಚೌಟ ಇವರು ಘೋಷಿಸಿದ ರೂ. 10 ಲಕ್ಷ ಪ್ರೋತ್ಸಾಹಧನವನ್ನು ಮಾನ್ಯ ಮೇಯರ್ ಮನೋಜ್ ಕುಮಾರ್ ಇವರು ಪಟ್ಲ ಫೌಂಡೇಶನಿನ ಕೇಂದ್ರೀಯ ಸಮಿತಿಯ ಜತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ ಇವರ ಮೂಲಕ ಟ್ರಸ್ಟಿಗೆ ನೀಡಿದರು.

ಜಿ. ಕೆ ನಾವಡರಿಗೆ ತುರ್ತು ಆರ್ಥಿಕ ಸಹಾಯ ನೀಡಿದ ಪಟ್ಲ ಫೌಂಡೇಶನ್

ಯಕ್ಷಗಾನದ ಪ್ರಸಿದ್ದ ಹಿರಿಯ ಭಾಗವತ ಜಿ. ಕೆ ನಾವಡ ಬಾಯಾರು ಇವರ ಆರೋಗ್ಯ  ತುಂಬಾ ಗಂಭೀರ ಸ್ಥಿತಿಯಲ್ಲಿದ್ದು ಅವರ ಧರ್ಮಪತ್ನಿ ಶ್ರೀದೇವಿ ಯವರು ಮತ್ತು ನಾವಡರ ಸ್ನೇಹಿತ ಕೀರ್ತಿ ಭಟ್ ರವರು ಇಂದು ಪಟ್ಲ ಸತೀಶ್ ಶೆಟ್ಟಿ ಯವರನ್ನು ಭೇಟಿಯಾಗಿ ತುರ್ತು ಆರ್ಥಿಕ ಸಹಾಯಕ್ಕಾಗಿ ಯಕ್ಷದ್ರುವ ಪಟ್ಲ ಫೌಂಡೇಶನ್ ಗೆ ಮನವಿ ಸಲ್ಲಿಸಿದರು.

ಕಾರ್ಕಳ ಘಟಕದ ಒಂಬತ್ತನೇ ‘ಪಟ್ಲ ಸಂಭ್ರಮೋತ್ಸವ’

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ “ಪಟ್ಲ  ಸಂಭ್ರಮೋತ್ಸವ” ಹಾಗೂ ಯಕ್ಷಕಲಾರಂಗ (ರಿ) ಕಾರ್ಕಳ ಇದರ 12ನೇ ವಾರ್ಷಿಕೋತ್ಸವವು ಪಟ್ಲ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ  ಕಾರ್ಕಳ  ಮಾರಿಗುಡಿ ವಠಾರದಲ್ಲಿ ನಡೆಯಿತು. ಗೋವಾ ಘಟಕದ ಅಧ್ಯಕ್ಷರಾದ ಉದ್ಯಮಿ ಗಣೇಶ್ ಶೆಟ್ಟಿ,  ರಶ್ಮಿ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ಅಧ್ಯಕ್ಷರಾದ ಡಿ. ಆರ್.‌ರಾಜು ಇವರ ಗೌರವ  ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.