ಮಂಚಿ ಕೊಳ್ನಾಡು ಪ್ರೌಢಶಾಲೆ: ಯಕ್ಷಧ್ರುವ – ಯಕ್ಷ ಶಿಕ್ಷಣ ಉದ್ಘಾಟನಾ ಕಾರ್ಯಕ್ರಮ

ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಇವರು ಸರಕಾರಿ ಪ್ರೌಢ ಶಾಲಾ ಮಕ್ಕಳಿಗೆ ಯಕ್ಷಧ್ರುವ ಯಕ್ಷ ಶಿಕ್ಷಣ ಎನ್ನುವ ವಿಶೇಷ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಯಕ್ಷಗಾನ ಕಲಿಕಾ ಯೋಜನೆಯು ಕಳೆದ ಶೈಕ್ಷಣಿಕ ಸಾಲಿನಿಂದ ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಆಯೋಜಿಸುತ್ತಾ ಬರುತ್ತಿದ್ದು, ಎರಡನೇ ಅವಧಿಯ 2024 – 25ನೇ ಶೈಕ್ಷಣಿಕ ಸಾಲಿನ ಯಕ್ಷ ಶಿಕ್ಷಣದ ಉದ್ಘಾಟನಾ ಕಾರ್ಯಕ್ರಮನ್ನು ಮಂಚಿ ಕೊಳ್ನಾಡು ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 14-06-2024 ರಂದು ನೆರವೇರಿಸಲಾಯಿತು.
ದುಬೈ ಯಕ್ಷೋತ್ಸವ 2024: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಆತ್ಮೀಯ ಸ್ವಾಗತ

ಯಕ್ಷಗಾನ ಅಭ್ಯಾಸ ಕೇಂದ್ರ UAE ಅರ್ಪಿಸುವ ” ದುಬೈ ಯಕ್ಷೋತ್ಸವ 2024 ” ಕಾರ್ಯಕ್ರಮಕ್ಕೆ ಆಗಮಿಸಿದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರನ್ನು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಕ್ಷಧ್ರುವ ದುಬೈ ಘಟಕದ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು
ಪಟ್ಲ ಸಂಭ್ರಮ: ಧನ್ಯೋತ್ಸವ ಕಾರ್ಯಕ್ರಮ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ಅಡ್ಯಾರ್ ಗಾರ್ಡನ್ ನಲ್ಲಿ ‘ಪಟ್ಲ ಸಂಭ್ರಮ-2024’ ಯಶಸ್ವಿಯಾಗಿ ನಡೆದ ಹಿನ್ನಲೆಯಲ್ಲಿ ಅಡ್ಯಾರ್ ನ ಸಂಭ್ರಮ ಸಭಾಂಗಣದಲ್ಲಿ ಧನ್ಯೋತ್ಸವ ಕಾರ್ಯಕ್ರಮ ನಡೆಯಿತು.
ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪದಲ್ಲಿ ನಟ ಕಿಚ್ಚ ಸುದೀಪ್

ಪಟ್ಲ ಫೌಂಡೇಶನ್ ಆಲದ ಮರ ಇದ್ದಂತೆ. ಕಲಾವಿದರ ಕಷ್ಟವನ್ನು ಅರಿತು ಸಂಘಟನೆ ಅವರನ್ನು ಸಲಹುತ್ತಿದೆ. ಪಟ್ಲ ಸತೀಶ್ ಶೆಟ್ಟಿ ಅವರ ಸಾಮಾಜಿಕ ಕಾರ್ಯ ಅದ್ಭುತವಾದದ್ದು. ಅವರ ಬಗ್ಗೆ ತಿಳಿಯುತ್ತಾ ಹೋದಂತೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು, ದಾನಿಗಳ ಜೊತೆಗೆ ವೇದಿಕೆ ಹಂಚಿಕೊಳ್ಳಲು ಖುಷಿ ಆಗುತ್ತದೆ ಎಂದು ನಟ ಕಿಚ್ಚ ಸುದೀಪ್ ಹೇಳಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಜರುಗಿದ ಯಕ್ಷಧ್ರುವ ಪಟ್ಟ ಸಂಭ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು.
ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ಅದು ದುಪ್ಪಟ್ಟಾಗುತ್ತದೆ: ಕನ್ಯಾಡಿ ಶ್ರೀ

ನಮ್ಮಲ್ಲಿರುವ ಸಂಪತ್ತನ್ನು ಕೂಡಿಡುವ ಬದಲು ಯೋಗ್ಯರಿಗೆ ಹಂಚಿದರೆ ಅದು ದುಪ್ಪಟ್ಟಾಗುತ್ತದೆ. ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು ಪರರಿಗೆ ಎಂಬ ನಾಣ್ಣುಡಿಯಂತೆ ನಾವು ಬದುಕಬೇಕು. ಮನುಷ್ಯ ಜನ್ಮವನ್ನು ನಮಗೆ ಭಗವಂತ ನೀಡಿದ್ದಾನೆ
ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಪ್ರಧಾನ

ಯುವಜನತೆ ಯಕ್ಷಗಾನದಿಂದ ದೂರವಾಗುತ್ತಿರುವ ಈ ಆಧುನಿಕ ಕಾಲಘಟ್ಟದಲ್ಲಿ ಸೋಷಿಯಲ್ ಮೀಡಿಯಾದಲ್ಲೂ ಯಕ್ಷಗಾನದ ವೈಭವ ಮರುಕಳಿಸುವಲ್ಲಿ ಯಕ್ಷಧ್ರುವ ಪಟ್ಲ ಟ್ರಸ್ಟ್ ಶ್ರಮ ಶ್ಲಾಘನೀಯವಾದುದು. ತುಳುನಾಡಿನ ಕಲೆಯನ್ನು ಮರಳಿ ಉಳಿಸುವಲ್ಲಿ ಪಟ್ಲ ಸತೀಶ್ ಶೆಟ್ಟಿಯವರ ಯೋಜನೆ ಮತ್ತು ಯೋಚನೆ ಇದೇ ರೀತಿ ಮುಂದುವರಿಯಲಿ
ಸಾರ್ಥಕ್ಯ ಕಂಡ ಪಟ್ಲ ಸಂಭ್ರಮ 2024

2024ರ ಪಟ್ಲ ಸಂಭ್ರಮವು ನಿಜ ಅರ್ಥದಲ್ಲಿ ಸಾರ್ಥಕ್ಯ ಪಡೆದಿದೆ ಎಂದರೆ ಖಂಡಿತವಾಗಿ ಅತಿಶಯದ ಮಾತಲ್ಲ. ಸದಾ ಮಂಗಲಮಯನಾದ ಅಡ್ಯಾರ್ ನ ಮಹಾಲಿಂಗೇಶ್ವರನ ಸನ್ನಿಧಾನದ ಪಕ್ಕದಲ್ಲಿ ನಡೆದ ಈ ಕಾರ್ಯಕ್ರಮವು ಸದಾಶಿವ ಶಶಿಧರನ ಅನುಗ್ರಹದಿಂದ ಹರಿ ಈಶರ ಪೂರ್ಣನುಗ್ರಹದೊಂದಿಗೆ ನಮ್ಮೆಲ್ಲರ ನಿರೀಕ್ಷೆಯಂತೆ ಸಂಪೂರ್ಣ ಯಶಸ್ಸಾಯಿತು ಎಂಬುದು ಎಲ್ಲರ ಉದ್ಘಾರ.
ಮೂಡಬಿದರೆ ಘಟಕದ 8ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ) ಮಂಗಳೂರು ಮೂಡಬಿದರೆ ಘಟಕದ 8ನೇ ವಾರ್ಷಿಕೋತ್ಸವವು ಎರಡು ದಿನಗಳ ಪರ್ಯಂತ ಅಲಂಗಾರು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಬೋಳಿಯಾರಿನಲ್ಲಿ ಯಕ್ಷಗಾನ ಬಯಲಾಟ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು – ಮುಡಿಪು ಘಟಕದ ಆಶ್ರಯದಲ್ಲಿ ಬೋಳಿಯಾರಿನಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ರಾಜಾರಾಮ್ ಭಟ್ ಕೈರಂಗಳ, ಸಂತೋಷ್ ಕುಮಾರ್ ಬೋಳಿಯಾರ್, ವಿನಯಕೃಷ್ಣ ಭಟ್ ಮುಡಿಪು ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ರಾಜಾರಾಮ್ ಭಟ್ ಇವರು ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ಜನಪರ ಕಾರ್ಯಗಳಿಗೆ ರೂ. 50,000 ಮೊತ್ತವನ್ನು ದೇಣಿಗೆಯಾಗಿ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಇವರಿಗೆ ಹಸ್ತಾಂತರಿಸಿದರು.
“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ “ಪಟ್ಲ ಸಂಭ್ರಮ” ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ ಫೌಂಡೇಶನ್ ನ ಎಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಸಕ್ರೀಯವಾಗಿ ಭಾಗವಹಿಸುವಂತೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.
