ಡಿ. 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ “ಯಕ್ಷ ಸಂಭ್ರಮ” ಅದ್ದೂರಿಯಾಗಿ ನಡೆಯಲಿದೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು.
ಬಹರೈನ್ನಲ್ಲಿ ಪಟ್ಲ ಫೌಂಡೇಶನ್ 4ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಹರೈನ್ ಮತ್ತು ಸೌದಿ ಘಟಕದ ನಾಲ್ಕನೇ ವಾರ್ಷಿಕೋತ್ಸವ ಸಂಭ್ರಮ ನವೆಂಬರ್ 1ರಂದು ಬಹರೈನ್ ಮನಾಮದ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಬಹಳ ಅದ್ಧೂರಿಯಾಗಿ ನಡೆಯಿತು.
ಕಾರ್ಕಳ ಘಟಕದ ಒಂಬತ್ತನೇ ‘ಪಟ್ಲ ಸಂಭ್ರಮೋತ್ಸವ’

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ “ಪಟ್ಲ ಸಂಭ್ರಮೋತ್ಸವ” ಹಾಗೂ ಯಕ್ಷಕಲಾರಂಗ (ರಿ) ಕಾರ್ಕಳ ಇದರ 12ನೇ ವಾರ್ಷಿಕೋತ್ಸವವು ಪಟ್ಲ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಕಾರ್ಕಳ ಮಾರಿಗುಡಿ ವಠಾರದಲ್ಲಿ ನಡೆಯಿತು. ಗೋವಾ ಘಟಕದ ಅಧ್ಯಕ್ಷರಾದ ಉದ್ಯಮಿ ಗಣೇಶ್ ಶೆಟ್ಟಿ, ರಶ್ಮಿ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ಅಧ್ಯಕ್ಷರಾದ ಡಿ. ಆರ್.ರಾಜು ಇವರ ಗೌರವ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಬೆಂಗಳೂರಿನಲ್ಲಿ ಒಂದೇ ದಿನ ಎರಡು ಕಾರ್ಯಕ್ರಮಗಳು ಸಂಪನ್ನ

ಕ್ಷಿಪ್ರ ಅವಧಿಯಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಬೆಂಗಳೂರು ಮಹಾನಗರದಲ್ಲಿ ಒಂದೇ ದಿನ ಎರಡು ಕಾರ್ಯಕ್ರಮಗಳು ಸಂಪನ್ನವಾದವು.
ಕಾರ್ಕಳ: 9ನೇ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ರಿ. ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ ಪಟ್ಲ ಸಂಭ್ರಮವು ಇದೇ ನವೆಂಬರ್ 16 ನೇ ಶನಿವಾರ ಕಾರ್ಕಳ ಮಾರಿಗುಡಿಯ ವಠಾರದಲ್ಲಿ ನಡೆಯಲಿದ್ದು, ಇಂದು ಆಮಂತ್ರಣ ಪತ್ರಿಕೆ ಮಾರಿಯಮ್ಮನ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು.
ಯಕ್ಷಾಶ್ರಯ ಫಲಾನುಭವಿಗಳಿಗೆ ಗೃಹನಿರ್ಮಾಣ ಮೊತ್ತದ ವಿತರಣೆ

ಪಟ್ಲ ಯಕ್ಷಾಶ್ರಯ ಯೋಜನೆಯ ಅಡಿಯಲ್ಲಿ ಆಯ್ಕೆ ಮಾಡಿದ ಯಕ್ಷಗಾನ ಕಲಾವಿದರು ಹಾಗೂ ದೈವಾರಾಧನೆ ಕ್ಷೇತ್ರದ ದೈವ ನರ್ತಕರು ಈಗಾಗಲೇ ಗೃಹನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದಾರೆ. ಈ ನಿರ್ಮಾಣಕ್ಕಾಗಿ ಫೌಂಡೇಶನ್ ನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು, ಕೊಡುಗೈ ದಾನಿಗಳು ನೀಡಿದ ಸುಮಾರು 15 ಲಕ್ಷ ಮೊತ್ತವನ್ನು ಫಲಾನುಭವಿಗಳಿಗೆ ದಿನಾಂಕ 21-10-2024 ಸೋಮವಾರ ಸಂಜೆ ಫೌಂಡೇಶನ್ ನ ಆಫೀಸಿನಲ್ಲಿ ವಿತರಿಸಿದರು.
ಸಿಯಾಟಲ್ ನಿಂದ ಫೀನಿಕ್ಸ್ ಗೆ ಪ್ರಯಾಣ ಬೆಳೆಸಿದ ಪಟ್ಲ ಫೌಂಡೇಶನ್ ತಂಡ

ಅಮೇರಿಕಾ ಪ್ರವಾಸದಲ್ಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ ಸಿಯಾಟಲ್ ನಿಂದ ಫೀನಿಕ್ಸ್ ಗೆ ಪ್ರಯಾಣ ಬೆಳೆಸಿತು. ಈ ವೇಳೆ ಸಿಯಾಟಲ್ ನ ಫೌಂಡೇಶನ್ ಅಭಿಮಾನಿ ಬಂಧುಗಳು ಪ್ರೀತಿ ಪೂರ್ವಕವಾಗಿ ಕಲಾವಿದರನ್ನು ಬೀಳ್ಗೊಟ್ಟರು.
ಸರಕಾರಿ ಪ್ರೌಢ ಶಾಲೆ ಕಡೇಶಿವಾಲಯ: ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನಾ ಸಮಾರಂಭ

ಯಕ್ಷಗಾನ ಕಲೆ ನಮ್ಮಲ್ಲಿ ನೈತಿಕತೆ ಮತ್ತು ಬೌದ್ಧಿಕ ಮಟ್ಟವನ್ನು ಹೆಚ್ಚಿಸಿ ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ
ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ಅದು ದುಪ್ಪಟ್ಟಾಗುತ್ತದೆ: ಕನ್ಯಾಡಿ ಶ್ರೀ

ನಮ್ಮಲ್ಲಿರುವ ಸಂಪತ್ತನ್ನು ಕೂಡಿಡುವ ಬದಲು ಯೋಗ್ಯರಿಗೆ ಹಂಚಿದರೆ ಅದು ದುಪ್ಪಟ್ಟಾಗುತ್ತದೆ. ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು ಪರರಿಗೆ ಎಂಬ ನಾಣ್ಣುಡಿಯಂತೆ ನಾವು ಬದುಕಬೇಕು. ಮನುಷ್ಯ ಜನ್ಮವನ್ನು ನಮಗೆ ಭಗವಂತ ನೀಡಿದ್ದಾನೆ
ಪ್ರಶಸ್ತಿ ಸಿಗದಿದ್ದರೂ ಕಲಾವಿದ ಸಣ್ಣವನಾಗಲ್ಲ: ರಾಮಚಂದ್ರ ಹೆಗಡೆ

ಈ ಪ್ರಶಸ್ತಿ ನನಗೆ ಸಿಕ್ಕಿದ್ದುಅಲ್ಲವೇ ಅಲ್ಲ. ನನ್ನ ಅಜ್ಜ ಮತ್ತು ಗುರು ಕೊಂಡದಕುಳಿ ರಾಮ ಹೆಗಡೆ, ನನ್ನನ್ನು ಬೆಳೆಸಿದ ಕಾಳಿಂಗ ನಾವಡರಿಗೆ ಸಿಗಬೇಕಾದ ಪ್ರಶಸ್ತಿ ಇದು. ಹಿಂದಿನ ತಲೆಮಾರಿನ ಅನೇಕ ಕಲಾವಿದರು ಊರಿಂದ ಊರಿಗೆ ನಡೆದುಹೋಗಿ ಯಕ್ಷಗಾನ ಕಲೆಗೆ ನೀರು ಗೊಬ್ಬರ ಹಾಕಿ ಬೆಳೆಸಿದ್ದಾರೆ. ಯಕ್ಷಗಾನಕ್ಕೆ ಬದುಕನ್ನೇ ಸವೆಸಿದ್ದಾರೆ. ಅವರಿಗೆ ಪ್ರಶಸ್ತಿಯೂ ಇಲ್ಲ, ಸಂಬಳವೂ ಇಲ್ಲ. ಅದರ ಫಲವನ್ನು ಈಗಿನ ತಲೆಮಾರಿನವರು ಅನುಭವಿಸುತ್ತಿದ್ದೇವೆ. ತೆಂಕುತಿಟ್ಟು ಆಗಲಿ, ಬಡಗು ಆಗಲಿ, ಬಡಾಬಡಗು ಆಗಲಿ ಯಕ್ಷಗಾನ ಕಲಾವಿದರು ಪರಸ್ಪರ ಗೌರವಿಸುವುದನ್ನು ಮೊದಲು ಕಲಿಯಬೇಕು
