yakshadhruvapatlafoundation.org

ಕನ್ಯಾನ ಸದಾಶಿವ ಶೆಟ್ಟರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನಿಂದ ಸಮ್ಮಾನ

ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಕೆ. ಶೆಟ್ಟಿ ಅವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಗೌರವ ಅಭಿನಂದನೆ ಸಲ್ಲಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಅವರು, ಸಮಾಜ ಸೇವೆ ಮಾಡಲು ನನಗೆ ಭಗವಂತ ನೀಡಿರುವ ಆಶೀರ್ವಾದವಾಗಿದ್ದು, ನನ್ನ ಬದುಕಿನ ಸುಯೋಗವಾಗಿದೆ. ಬಡ ಜನತೆಯ ಸೇವೆ ನನಗೆ ತೃಪ್ತಿ ನೀಡಿದೆ. ಸಮಾಜದ ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ ಸಾಧ್ಯವಾಗಿದೆ ಎಂದರು.