Skip to main content

yakshadhruvapatlafoundation.org

ಪಟ್ಲ ಯಕ್ಷಾಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ರೂ. 25 ಲಕ್ಷ ಅನುದಾನ ವಿತರಣೆ

ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಾಶ್ರಯ ಯೋಜನೆಯಡಿ ಗೃಹ ನಿರ್ಮಾಣಕ್ಕಾಗಿ ವಿವಿಧ ಯಕ್ಷಗಾನ ಮೇಳಗಳ ಕಲಾವಿದರಿಗೆ ಹಾಗೂ ದೈವಾರಾದನೆಯ ಪರಿಚಾರಕರಿಗೆ ರೂ. 25 ಲಕ್ಷದ ಮೊತ್ತದ ಚೆಕ್ಕುಗಳನ್ನು ಇಂದು ಟ್ರಸ್ಟಿನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ ಇವರ ಕಚೇರಿಯಲ್ಲಿ 16 ಮಂದಿ ಫಲಾನುಭವಿಗಳಿಗೆ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಹಾಗೂ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ವಿತರಿಸಿದರು.

ಓಂ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಂಟ್ವಾಳ ಜಯರಾಮ ಆಚಾರ್ಯರ ಸಂಸ್ಮರಣೆ

ಓಂ ಫ್ರೆಂಡ್ಸ್ ಕ್ಲಬ್ (ರಿ) ಕಳ್ಳಿಗೆ- ಪಚ್ಚಿನಡ್ಕ ಇದರ ರಜತ ಸಂಭ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಖ್ಯಾತ ಹಾಸ್ಯಗಾರರು ಬಂಟ್ವಾಳ ಜಯರಾಮ ಆಚಾರ್ಯ ಇವರ ಸಂಸ್ಮರಣೆ ಮತ್ತು  ಧನಸಹಾಯ ಮಾಡಲಾಯಿತು.

ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈ ಹಸ್ತಾಂತರ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಶ್ರೀ ಪಟ್ಲ  ಸತೀಶ್ ಅವರ  ಕನಸಿನ ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈಯನ್ನು ಫಲಾನುಭವಿಗಳಾದ ಶ್ರೀ ಧರ್ಮಸ್ಥಳದ  ಮೇಳದ ಚೆಂಡೆ ವಾದಕರಾದ ಶ್ರೀ ಚಂದ್ರಶೇಖರವರಿಗೆ ಹಸ್ತಾಂತರಿಸಲಾಯಿತು.

ಯಕ್ಷಾಶ್ರಯ ಫಲಾನುಭವಿಗಳಿಗೆ ಗೃಹನಿರ್ಮಾಣ ಮೊತ್ತದ ವಿತರಣೆ

ಪಟ್ಲ ಯಕ್ಷಾಶ್ರಯ ಯೋಜನೆಯ ಅಡಿಯಲ್ಲಿ ಆಯ್ಕೆ ಮಾಡಿದ ಯಕ್ಷಗಾನ ಕಲಾವಿದರು ಹಾಗೂ ದೈವಾರಾಧನೆ ಕ್ಷೇತ್ರದ ದೈವ ನರ್ತಕರು ಈಗಾಗಲೇ ಗೃಹನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದಾರೆ. ಈ ನಿರ್ಮಾಣಕ್ಕಾಗಿ ಫೌಂಡೇಶನ್ ನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು, ಕೊಡುಗೈ ದಾನಿಗಳು ನೀಡಿದ ಸುಮಾರು 15 ಲಕ್ಷ ಮೊತ್ತವನ್ನು ಫಲಾನುಭವಿಗಳಿಗೆ ದಿನಾಂಕ 21-10-2024 ಸೋಮವಾರ ಸಂಜೆ ಫೌಂಡೇಶನ್ ನ ಆಫೀಸಿನಲ್ಲಿ ವಿತರಿಸಿದರು.