ಕಡಂದಲೆ: ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ

ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ.) ಮಂಗಳೂರು, ಇದರ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ಮೂಡಬಿದ್ರೆಯ ಕಡಂದಲೆ ಶ್ರೀ ಸುಬ್ರಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಪಟ್ಲ ಫೌಂಡೇಶನ್ ಮೂಡಬಿದ್ರಿ ಘಟಕದ ಸಹಕಾರದೊಂದಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ ಕಾರ್ಯಕ್ರಮವನ್ನು ಶ್ರೀಯುತ ಉಮನಾಥ್ ಕೋಟ್ಯಾನ್ ಶಾಸಕರು ಮುಲ್ಕಿ ಮೂಡಬಿದ್ರಿ ಕ್ಷೇತ್ರ ಇವರು ಉದ್ಘಾಟಿಸಿದರು.
ಬಂಟ್ವಾಳ: ಯಕ್ಷ ಶಿಕ್ಷಣ ಉದ್ಘಾಟನೆ

ಬಂಟ್ವಾಳ ತಾಲೂಕಿನ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಎರಡನೇ ವರ್ಷದ ಯಕ್ಷ ಧ್ರುವ ಯಕ್ಷ ಶಿಕ್ಷಣದ ಉದ್ಘಾಟನೆಯು ಈ ದಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಅಧ್ಯಕ್ಷತೆಯಲ್ಲಿ ನೆರವೇರಿತು.
ಬೈಕಂಪಾಡಿ: ಯಕ್ಷನಾಟ್ಯ ತರಬೇತಿ ಉದ್ಘಾಟನೆ

ದಿನಾಂಕ 19/06.2024 ರಂದು ಬೆಳಿಗ್ಗೆ 11.00 ಗಂಟೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರಕಾರಿ ಪ್ರೌಢ ಶಾಲೆ, ಮೀನಕಳಿಯ – ಬೈಕಂಪಾಡಿ ಇಲ್ಲಿ 2024 – 25 ನೇ ಸಾಲಿನ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು.
ಪಳ್ಳಿ ನಿಂಜೂರು : ಯಕ್ಷ ಶಿಕ್ಷಣ ನಾಟ್ಯ ತರಬೇತಿ

ಯಕ್ಷಧ್ರುವ ಪಟ್ಲ ಪೌಂಡೇಶನ್ ಪಳ್ಳಿ ನಿಂಜೂರು ಇದರ ವತಿಯಿಂದ ಪಳ್ಳಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ ಕಾರ್ಯಕ್ರಮವನ್ನು ಬಹುಮೇಳಗಳ ವ್ಯವಸ್ಥಾಪಕರಾದ ಪಳ್ಳಿ ಕಿಶನ್ ಹೆಗ್ಡೆ ಉದ್ಘಾಟಿಸಿದರು.
ನಿಡ್ಲೆ: ಯಕ್ಷನಾಟ್ಯ ತರಬೇತಿ ಉದ್ಘಾಟನೆ

ದಿನಾಂಕ 18-06-2024 ರಂದು ಅಪರಾಹ್ನ 2.30 ಗಂಟೆಗೆ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರ್ಕಾರಿ ಪ್ರೌಢ ಶಾಲೆ ನಿಡ್ಲೆ, ಬೆಳ್ತಂಗಡಿ ತಾಲೂಕು ಇಲ್ಲಿ 2024-25 ನೇ ಸಾಲಿನ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು.
‘ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮ ಯಕ್ಷಗಾನ’: ಗಿರೀಶ್ ಶೆಟ್ಟಿ

ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು ರಮ್ಯ ಅದ್ಬುತ ಕಲೆ ಎಂದು ಗಿರೀಶ್ ಶೆಟ್ಟಿ ಅಧ್ಯಕ್ಷರು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು ಎಕ್ಕಾರು ಘಟಕ ಇವರು ಅಭಿಪ್ರಾಯಪಟ್ಟರು.
ಮಂಚಿ ಕೊಳ್ನಾಡು ಪ್ರೌಢಶಾಲೆ: ಯಕ್ಷಧ್ರುವ – ಯಕ್ಷ ಶಿಕ್ಷಣ ಉದ್ಘಾಟನಾ ಕಾರ್ಯಕ್ರಮ

ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಇವರು ಸರಕಾರಿ ಪ್ರೌಢ ಶಾಲಾ ಮಕ್ಕಳಿಗೆ ಯಕ್ಷಧ್ರುವ ಯಕ್ಷ ಶಿಕ್ಷಣ ಎನ್ನುವ ವಿಶೇಷ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಯಕ್ಷಗಾನ ಕಲಿಕಾ ಯೋಜನೆಯು ಕಳೆದ ಶೈಕ್ಷಣಿಕ ಸಾಲಿನಿಂದ ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಆಯೋಜಿಸುತ್ತಾ ಬರುತ್ತಿದ್ದು, ಎರಡನೇ ಅವಧಿಯ 2024 – 25ನೇ ಶೈಕ್ಷಣಿಕ ಸಾಲಿನ ಯಕ್ಷ ಶಿಕ್ಷಣದ ಉದ್ಘಾಟನಾ ಕಾರ್ಯಕ್ರಮನ್ನು ಮಂಚಿ ಕೊಳ್ನಾಡು ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 14-06-2024 ರಂದು ನೆರವೇರಿಸಲಾಯಿತು.
ದುಬೈ ಯಕ್ಷೋತ್ಸವ 2024: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಆತ್ಮೀಯ ಸ್ವಾಗತ

ಯಕ್ಷಗಾನ ಅಭ್ಯಾಸ ಕೇಂದ್ರ UAE ಅರ್ಪಿಸುವ ” ದುಬೈ ಯಕ್ಷೋತ್ಸವ 2024 ” ಕಾರ್ಯಕ್ರಮಕ್ಕೆ ಆಗಮಿಸಿದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರನ್ನು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಕ್ಷಧ್ರುವ ದುಬೈ ಘಟಕದ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು
ಪಟ್ಲ ಸಂಭ್ರಮ: ಧನ್ಯೋತ್ಸವ ಕಾರ್ಯಕ್ರಮ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ಅಡ್ಯಾರ್ ಗಾರ್ಡನ್ ನಲ್ಲಿ ‘ಪಟ್ಲ ಸಂಭ್ರಮ-2024’ ಯಶಸ್ವಿಯಾಗಿ ನಡೆದ ಹಿನ್ನಲೆಯಲ್ಲಿ ಅಡ್ಯಾರ್ ನ ಸಂಭ್ರಮ ಸಭಾಂಗಣದಲ್ಲಿ ಧನ್ಯೋತ್ಸವ ಕಾರ್ಯಕ್ರಮ ನಡೆಯಿತು.
ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪದಲ್ಲಿ ನಟ ಕಿಚ್ಚ ಸುದೀಪ್

ಪಟ್ಲ ಫೌಂಡೇಶನ್ ಆಲದ ಮರ ಇದ್ದಂತೆ. ಕಲಾವಿದರ ಕಷ್ಟವನ್ನು ಅರಿತು ಸಂಘಟನೆ ಅವರನ್ನು ಸಲಹುತ್ತಿದೆ. ಪಟ್ಲ ಸತೀಶ್ ಶೆಟ್ಟಿ ಅವರ ಸಾಮಾಜಿಕ ಕಾರ್ಯ ಅದ್ಭುತವಾದದ್ದು. ಅವರ ಬಗ್ಗೆ ತಿಳಿಯುತ್ತಾ ಹೋದಂತೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು, ದಾನಿಗಳ ಜೊತೆಗೆ ವೇದಿಕೆ ಹಂಚಿಕೊಳ್ಳಲು ಖುಷಿ ಆಗುತ್ತದೆ ಎಂದು ನಟ ಕಿಚ್ಚ ಸುದೀಪ್ ಹೇಳಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಜರುಗಿದ ಯಕ್ಷಧ್ರುವ ಪಟ್ಟ ಸಂಭ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು.
