Skip to main content

yakshadhruvapatlafoundation.org

ಯಕ್ಷಗಾನ ಕಲಾವಿದರಿಗೆ ನೆರವಾಗಿರುವ ಹೆಮ್ಮೆ: ಪಟ್ಲ

ಯಕ್ಷಗಾನ, ನಾಟಕ ಕಲಾವಿದರಿಗೆ ಸುಮಾರು 15 ಕೋಟಿ ರೂ. ವರೆಗೆ ನೆರವು ನೀಡಿರುವ ಹೆಮ್ಮೆ, ಯಕ್ಷಗಾನ ಕಲಾವಿದನಾದ ತನಗೆ ಇದೆ. ಇದಕ್ಕೆ ಅಭಿಮಾನಿಗಳ ಪ್ರೋತ್ಸಾಹವೇ ಕಾರಣ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಸುರತ್ಕಲ್ ಬಂಟರ ಭವನ ವಠಾರದಲ್ಲಿ ಶನಿವಾರ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ, ಸ್ಟಾರ್ ವ್ಯಾಲ್ಯೂ […]

‘ತ್ರಿಜನ್ಮ ಮೋಕ್ಷ’ ಯಕ್ಷಗಾನ ಬಯಲಾಟದಲ್ಲಿ ಪಟ್ಲ ಫೌಂಡೇಶನಿಗೆ ನೆನಪಿನ ಕಾಣಿಕೆ

ಜಪ್ಪು ಮಜಿಲ ಹತ್ತು ಸಮಸ್ತರ ವತಿಯಿಂದ ಮಂಗಳಾದೇವಿ ದೇವಸ್ಥಾನದ ಎದುರುಗಡೆ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಯವರಿಂದ ‘ತ್ರಿಜನ್ಮ ಮೋಕ್ಷ’ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ರೂ. ಒಂದು ಲಕ್ಷ ಮೊತ್ತದ ಚೆಕ್‌ನ್ನು ಹಾಗೂ 2 ಬೆಳ್ಳಿಯ ದೀಪವನ್ನು ಮೇಳದ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ ಇವರಿಗೆ ನೀಡಲಾಯಿತು.

ಪಟ್ಲ ಯಕ್ಷಾಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ರೂ. 25 ಲಕ್ಷ ಅನುದಾನ ವಿತರಣೆ

ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಾಶ್ರಯ ಯೋಜನೆಯಡಿ ಗೃಹ ನಿರ್ಮಾಣಕ್ಕಾಗಿ ವಿವಿಧ ಯಕ್ಷಗಾನ ಮೇಳಗಳ ಕಲಾವಿದರಿಗೆ ಹಾಗೂ ದೈವಾರಾದನೆಯ ಪರಿಚಾರಕರಿಗೆ ರೂ. 25 ಲಕ್ಷದ ಮೊತ್ತದ ಚೆಕ್ಕುಗಳನ್ನು ಇಂದು ಟ್ರಸ್ಟಿನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ ಇವರ ಕಚೇರಿಯಲ್ಲಿ 16 ಮಂದಿ ಫಲಾನುಭವಿಗಳಿಗೆ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಹಾಗೂ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ವಿತರಿಸಿದರು.

ಜಿ. ಕೆ ನಾವಡರಿಗೆ ತುರ್ತು ಆರ್ಥಿಕ ಸಹಾಯ ನೀಡಿದ ಪಟ್ಲ ಫೌಂಡೇಶನ್

ಯಕ್ಷಗಾನದ ಪ್ರಸಿದ್ದ ಹಿರಿಯ ಭಾಗವತ ಜಿ. ಕೆ ನಾವಡ ಬಾಯಾರು ಇವರ ಆರೋಗ್ಯ  ತುಂಬಾ ಗಂಭೀರ ಸ್ಥಿತಿಯಲ್ಲಿದ್ದು ಅವರ ಧರ್ಮಪತ್ನಿ ಶ್ರೀದೇವಿ ಯವರು ಮತ್ತು ನಾವಡರ ಸ್ನೇಹಿತ ಕೀರ್ತಿ ಭಟ್ ರವರು ಇಂದು ಪಟ್ಲ ಸತೀಶ್ ಶೆಟ್ಟಿ ಯವರನ್ನು ಭೇಟಿಯಾಗಿ ತುರ್ತು ಆರ್ಥಿಕ ಸಹಾಯಕ್ಕಾಗಿ ಯಕ್ಷದ್ರುವ ಪಟ್ಲ ಫೌಂಡೇಶನ್ ಗೆ ಮನವಿ ಸಲ್ಲಿಸಿದರು.

ಅನಾರೋಗ್ಯದಿಂದ ಸಂಕಷ್ಟದಲ್ಲಿರುವ ವಿದ್ವಾಂಸ ಶ್ರೀ ಗಣೇಶ್ ಕೊಲೆಕಾಡಿಗೆ ನೆರವಾಗಲು ಪಟ್ಲ ಸತೀಶ್ ಶೆಟ್ಟಿ ಮನವಿ

ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಶ್ರೀ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ದಿನಾಂಕ 3-12-2024 ಮಂಗಳವಾರ ಸಂಜೆ ಶ್ರೀಯುತರ ಮನೆಗೆ ಭೇಟಿ ನೀಡಿದರು.

ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭ

ಯಕ್ಷಧ್ರುವ ಪಟ್ಲ ಸತೀಶ್ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭವು 21-11-2024ರಂದು ನೂತನವಾಗಿ ಉದ್ಘಾಟನೆಗೊಂಡ ಶೇಡಿಕೊಡ್ಲು ಮಂದಾರ್ತಿ ದುರ್ಗಾ ಗಾರ್ಡನ್ ಆವರಣದಲ್ಲಿ ಬ್ರಹ್ಮಾವರ ಘಟಕದ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ ಕೊಕ್ಜರ್ಣೆ ಇವರ ಸಭಾಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಯಿತು. ದಿ| ಚಂದ್ರ ನಾಯ್ಕರ ಧರ್ಮಪತ್ನಿ ಶ್ರೀಮತಿ ವಾಣಿ ಇವರಿಗೆ ನೀಲಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೂ. 25 ಸಾವಿರ ಆಸರೆಯ ಪ್ರೋತ್ಸಾಹಧನ, ಹಿರಿಯ ಕಲಾವಿದ ಅಜ್ರಿ ಗೋಪಾಲ ಗಾಣಿಗ ಇವರಿಗೆ ಮನೆ ನಿರ್ಮಾಣ ಸಹಾಯಾರ್ಥವಾಗಿ ರೂ. 5 ಲಕ್ಷದ ಮೊತ್ತವನ್ನು ನೀಡಲಾಯಿತು.

ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ.) ಮಂಗಳೂರು ಇದರ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯು ಮಂಗಳೂರಿನ ಕದ್ರಿಯಲ್ಲಿ ದಿನಾಂಕ: 17/11/2024ರ ರವಿವಾರ ನಡೆಯಿತು.

ತ್ರಿರಂಗ ಸಂಗಮ ಮುಂಬಯಿ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಗೌರವ

ಯಕ್ಷಗಾನ ಪ್ರದರ್ಶನ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಮುಂಬಯಿ ಯಾನ 2024ರ ಸಮಾರೋಪ ಸಮಾರಂಭ, ಶ್ರೀ ದೇವಿ ಮಹಾತ್ಮೆ ಪ್ರಸಂಗದ ಪ್ರದರ್ಶನ ನಡೆಯಿತು.

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಉಪ್ಪಿನಂಗಡಿ ಘಟಕದ ವತಿಯಿಂದ ಕುಂಬ್ಳೆ ಶ್ರೀಧರ ರಾವ್ ಇವರಿಗೆ ನುಡಿನಮನ ಕಾರ್ಯಕ್ರಮ

ಉಪ್ಪಿನಂಗಡಿ ಪರಿಸರದ 34 ನೆಕ್ಕಿಲಾಡಿ ನಿವಾಸಿ ತೆಂಕುತಿಟ್ಟಿನ ಅಗ್ರಮಾನ್ಯ ಹಿರಿಯ ಕಲಾವಿದರಾದ ಶ್ರೀಮಾನ್ ಕುಂಬ್ಳೆ ಶ್ರೀಧರ ರಾವ್ ಇವರ ಆಕಸ್ಮಿಕ ನಿಧನಕ್ಕೆ ಶ್ರದ್ಧಾಂಜಲಿ ಮತ್ತು ನುಡಿ ನಮನ ಕಾರ್ಯಕ್ರಮ ಉಪ್ಪಿನಂಗಡಿಯ ಶ್ರೀಗುರು ಸುದೀಂದ್ರ ಕಲಾಮಂದಿರದಲ್ಲಿ ಜರಗಿತು.