ಪೊಳಲಿ ಘಟಕದ 5ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಪೊಳಲಿ ಘಟಕದ 5ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಯಕ್ಷ ಪಯಣದ ರಜತ ಸಂಭ್ರಮದಲ್ಲಿರುವ ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. “ಯಕ್ಷಧ್ರುವ”ಎಂಬ ಬಿರುದನ್ನು ನೀಡಿ ಲೋಕವಿಖ್ಯಾತರನ್ನಾಗಿಸಿದ ಪಟ್ಲ ಭಾಗವತರ ಅಭಿಮಾನಿ ವರ್ಗ ಪೊಳಲಿ ಸನ್ನಿಧಾನದಲ್ಲಿ ಸಂಯೋಜಿಸಲ್ಪಟ್ಟಿತು. [Best_Wordpress_Gallery id=”191″ gal_title=”ಪೊಳಲಿ ಘಟಕದ 5ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ”]
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾದ ಉದ್ಯಮಿಯಿಂದ 1.25 ಕೋಟಿ ದೇಣಿಗೆ

ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶ್ರೀ ಶಾರದಾ ಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಅವರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ಶುಭದಿನವೇ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಒಂದು ಕೋಟಿ ಇಪ್ಪತ್ತೈದು ಲಕ್ಷ ಮೊತ್ತದ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.
ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟರಿಗೆ ಪ್ರಶಸ್ತಿ ಪ್ರದಾನ

ಯಕ್ಷಗಾನಕ್ಕೆ ಹೊಸ ಆಯಾಮ ಕೊಟ್ಟವರು ಪಟ್ಲ ಸತೀಶ್ ಶೆಟ್ಟಿಯಾದರೆ ಅದಕ್ಕೆ ಶಶಿಯಾಗಿ ಬೆಳಕು ಕೊಟ್ಟವರು ಶಶಿಧರ್ ಶೆಟ್ಟಿ ಅವರು. ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ಮನಸ್ಸು ಕರಾವಳಿಯಲ್ಲಿದೆ. ಅದರಲ್ಲಿ ಶಶಿಧರ್ ಶೆಟ್ಟಿ ಅವರಿಗೆ ಅವರ ತಾಯಿ ಕಾಶಿ ಶೆಟ್ಟಿ ಅವರ ಆಶೀರ್ವಾದದಿಂದ ಬಂದಿದೆ ಎಂದು ಹರೀಶ್ ಪೂಂಜ ಅಭಿಪ್ರಾಯಪಟ್ಟರು.
ಪ್ರತಿಭಾ ಕಾರಂಜಿಯಲ್ಲಿ ಯಕ್ಷಗಾನವೂ ಸೇರಲಿ

ಗುಣಾತ್ಮಕ ಶಿಕ್ಷಣಕ್ಕೆ ಯಕ್ಷಗಾನ ಪೂರಕ ಕಲೆ. ಪ್ರತಿವರ್ಷ ಶಿಕ್ಷಣ ಇಲಾಖೆಯಿಂದ ಪ್ರತಿಭಾ ಕಾರಂಜಿ ನಡೆಸಲಾಗುತ್ತಿದೆ. ಆದರೆ ಈವರೆಗೆ ಯಕ್ಷಗಾನ ಸೇರ್ಪಡೆಯಾಗಿರಲಿಲ್ಲ. ಮುಂದೆ ಪ್ರತಿಭಾ ಕಾರಂಜಿಯಲ್ಲೂ ಯಕ್ಷಗಾನ ಸೇರ್ಪಡೆಗೊಳಿಸುವಂತೆ ಇಲಾಖೆಗೆ ನಾನು ಮನವಿ ಮಾಡುತ್ತೇನೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಹೇಳಿದರು.
ಯಕ್ಷಗಾನ ಕಲೆಗೆ ಹೊಸ ರೂಪ ಕೊಟ್ಟ ಯಕ್ಷಧ್ರುವ

ಯಕ್ಷಗಾನ ಶ್ರೀಮಂತ ಕಲೆಯಾಗಿದೆ. ಕಲೆಗೆ, ಕಲಾವಿದರ ಬದುಕಿಗೆ ಹೊಸ ರೂಪ ಕೊಟ್ಟವರು ಸತೀಶ್ ಶೆಟ್ಟಿ ಪಟ್ಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಗೆ ಶಕ್ತಿಯಾಗಿ ನಿಂತ ಉದ್ಯಮಿ ಶಶಿಧರ ಶೆಟ್ಟಿಯವರು ತಾಲೂಕಿನಲ್ಲಿ ಯಕ್ಷ ಸಂಭ್ರಮ ನಡೆಸಿ ಕಲೆಯನ್ನು ಶ್ರೀಮಂತಗೊಳಿಸುತ್ತಿದ್ದಾರೆ.
ಡಿ. 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ “ಯಕ್ಷ ಸಂಭ್ರಮ” ಅದ್ದೂರಿಯಾಗಿ ನಡೆಯಲಿದೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು.
ನಾಗತೀರ್ಥ ಚಿಟ್ಸ್ ತೀರ್ಥಹಳ್ಳಿ: ಪಟ್ಲ ಸತೀಶ್ ಶೆಟ್ಟಿಯವರಿಗೆ ವಿಶೇಷ ಗೌರವ

ನಾಗತೀರ್ಥ ಚಿಟ್ಸ್ ತೀರ್ಥಹಳ್ಳಿ ಇದರ ಪ್ರಧಾನ ಕಚೇರಿಯಲ್ಲಿ ತೀರ್ಥಹಳ್ಳಿಯ ಗಣ್ಯರ ಸಮ್ಮುಖದಲ್ಲಿ ಪಟ್ಲ ಸತೀಶ್ ಶೆಟ್ಟಿಯವರಿಗೆ ವಿಶೇಷ ಗೌರವ ಅಭಿವಂದನೆ ಸಲ್ಲಿಸಲಾಯಿತು.
ಶಿವಮೊಗ್ಗ: ಉಚಿತ ಯಕ್ಷಗಾನ ತರಗತಿಯ ಉದ್ಘಾಟನೆ

ಸರ್ಕಾರಿ ಪ್ರೌಢಶಾಲೆ ನಗರ ಮತ್ತು ಪ್ರಜ್ಞಾಭಾರತಿ ವಿದ್ಯಾಕೇಂದ್ರ ನಿಟ್ಟೂರು ಶಾಲೆಯಲ್ಲಿ ಉಚಿತ ಯಕ್ಷಗಾನ ತರಗತಿಯು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು.
ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭ

ಯಕ್ಷಧ್ರುವ ಪಟ್ಲ ಸತೀಶ್ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭವು 21-11-2024ರಂದು ನೂತನವಾಗಿ ಉದ್ಘಾಟನೆಗೊಂಡ ಶೇಡಿಕೊಡ್ಲು ಮಂದಾರ್ತಿ ದುರ್ಗಾ ಗಾರ್ಡನ್ ಆವರಣದಲ್ಲಿ ಬ್ರಹ್ಮಾವರ ಘಟಕದ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ ಕೊಕ್ಜರ್ಣೆ ಇವರ ಸಭಾಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಯಿತು. ದಿ| ಚಂದ್ರ ನಾಯ್ಕರ ಧರ್ಮಪತ್ನಿ ಶ್ರೀಮತಿ ವಾಣಿ ಇವರಿಗೆ ನೀಲಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೂ. 25 ಸಾವಿರ ಆಸರೆಯ ಪ್ರೋತ್ಸಾಹಧನ, ಹಿರಿಯ ಕಲಾವಿದ ಅಜ್ರಿ ಗೋಪಾಲ ಗಾಣಿಗ ಇವರಿಗೆ ಮನೆ ನಿರ್ಮಾಣ ಸಹಾಯಾರ್ಥವಾಗಿ ರೂ. 5 ಲಕ್ಷದ ಮೊತ್ತವನ್ನು ನೀಡಲಾಯಿತು.
ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ.) ಮಂಗಳೂರು ಇದರ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯು ಮಂಗಳೂರಿನ ಕದ್ರಿಯಲ್ಲಿ ದಿನಾಂಕ: 17/11/2024ರ ರವಿವಾರ ನಡೆಯಿತು.
