ಅಮೇರಿಕದಲ್ಲಿ ಯಕ್ಷಗಾನ ಪ್ರದರ್ಶನ ನೀಡಲು ತೆರಳುತ್ತಿರುವ ಶ್ರೀ ಪಟ್ಲ ಸತೀಶ ಶೆಟ್ಟರು, ಶ್ರೀಯುತ ಪ್ರೊ.ಎಂ. ಎಲ್. ಸಾಮಗರು ಉಡುಪಿಯಲ್ಲಿ ದಾನವಾಗಿ ನೀಡಿದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಮಹತ್ವಾಕಾಂಕ್ಷೆ ಯೋಜನೆ “ಪಟ್ಲ ಯಕ್ಷಾಶ್ರಯ”ದ ದಾಖಲೆಗಳನ್ನು ದಿನಾಂಕ 09/07/2024 ರಂದು ಉಡುಪಿ ಘಟಕದ ಸಂಚಾಲಕರಾದ ಶ್ರೀ ಸುಧಾಕರ ಆಚಾರ್ಯರಿಗೆ ಬೆಂಗಳೂರಿನ ಸೌಂದರ್ಯ ಹೋಟೆಲ್ ನಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಘಟಕದ ಶ್ರೀ ಗೋಪಿ ಭಟ್, ಶ್ರೀ ಸತ್ರಾಜಿತ ಭಾರ್ಗವ, ಕಲಾವಿದರಾದ ಶ್ರೀ ಚಂದ್ರಶೇಖರ ಧರ್ಮಸ್ಥಳ, ಶ್ರೀ ಮಹೇಶ ಮಣಿಯಾಣಿ, ಶ್ರೀ ಪ್ರಶಾಂತ ಶೆಟ್ಟಿ ನೆಲ್ಯಾಡಿ, ಶ್ರೀ ಮೋಹನ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ
Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...