Skip to main content

yakshadhruvapatlafoundation.org

ಮಂಗಳೂರು ಯಕ್ಷಾಭಿಮಾನಿ ವಕೀಲರ ವೃಂದ, ಮಂಗಳೂರು ವಕೀಲರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು – ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗೌರವಿಸುವುದರೊಂದಿಗೆ ಕಲಾವಿದರಾದ ಸುಬ್ರಾಯ ಹೊಳ್ಳ ಕಾಸರಗೋಡು, ಅಕ್ಷಯಕುಮಾರ್ ಮಾರ್ನಾಡ್ ಇವರನ್ನು ಜಿಲ್ಲಾ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು, ಸಂಘಟಕರ ಉಪಸ್ಥಿತಿಯಲ್ಲಿ ಸಂಮಾನಿಸಲಾಯಿತು.

ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತೀಯ ಸಮ್ಮೇಳನ “ಉನ್ನತಿ” ಯ ಕಾರ್ಯಕ್ರಮವು ಮೂಡುಬಿದಿರೆ ಸಮೀಪದ ಅಶ್ವತ್ಥಪುರದಲ್ಲಿರುವ Leksha Valleyಯಲ್ಲಿ ನಡೆಯಿತು. ವಿಶೇಷ ಕಲಾ ಸಾಧಕರ ನೆಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗೌರವಿಸಲಾಯಿತು.

Leave a Reply

Your email address will not be published. Required fields are marked *