ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು – ಮುಡಿಪು ಘಟಕದ ಆಶ್ರಯದಲ್ಲಿ ಬೋಳಿಯಾರಿನಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ರಾಜಾರಾಮ್ ಭಟ್ ಕೈರಂಗಳ, ಸಂತೋಷ್ ಕುಮಾರ್ ಬೋಳಿಯಾರ್, ವಿನಯಕೃಷ್ಣ ಭಟ್ ಮುಡಿಪು ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ರಾಜಾರಾಮ್ ಭಟ್ ಇವರು ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ಜನಪರ ಕಾರ್ಯಗಳಿಗೆ ರೂ. 50,000 ಮೊತ್ತವನ್ನು ದೇಣಿಗೆಯಾಗಿ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಇವರಿಗೆ ಹಸ್ತಾಂತರಿಸಿದರು.










